ಕಲಬುರಗಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ ನಡೆದಿದೆ. ಕೆಕೆಆರ್ಟಿಸಿ ಬಸ್ ಚಾಲಕ ನಾಗಯ್ಯಾ ಸ್ವಾಮಿ (45) ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಇರಿದುಕೊಂದಿದ್ದಾರೆ.
ನಾಗಯ್ಯಾ ಸ್ವಾಮಿ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯೆಂದು ತಿಳಿದುಬಂದಿದೆ. ಅವರು ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಬಸ್ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು.
ಕಲಬುರಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಊಟ ಮಾಡಿ ಹೊರ ಬರುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
ದುಷ್ಕರ್ಮಿಗಳು ಚಾಲಕ ನಾಗಯ್ಯ ಸ್ವಾಮಿ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ. ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಬ್ರಹ್ಮಪುರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.