ಕಲಬುರಗಿ | ಕಬ್ಬು ಬೆಳೆಗಾರರ ಬಾಕಿಹಣ ಬಿಡುಗಡೆಗೆ ಆಗ್ರಹ; ಕೆಪಿಆರ್‌ಎಸ್‌ ಪ್ರತಿಭಟನೆ

Date:

Advertisements

ಕಬ್ಬು ಬೆಳೆಗಾರರ ಬಾಕಿಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕಲಬುರಗಿ ಜಿಲ್ಲೆಯ ಅಫಜಲಪುರದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ರೈತರ ನಿಯೋಗ ಸ್ಥಳೀಯ ಅಧಿಕಾರಿ ಮೂಲಕ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಚರ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

“ಅಫಜಲಪುರ ತಾಲೂಕಿನ ಭೀಮಾನದಿಯ ನೀರಾವರಿ ಅಫಜಲಪುರ ತಾಲೂಕು ಗಳ್ಳುರು ಮತ್ತು ಮೊನಟಗಾ ಬ್ರಿಜ್ ಕಂ ಬ್ಯಾರೆಜ್ ಕಾಮಗಾರಿ ಮುಗಿದಿದೆ. ಆದರೆ ಗೇಟ್ ಅಳವಡಿಸಿಲ್ಲ. ಮುಳುಗಡೆ ಪ್ರದೇಶದ ರೈತರಿಗೆ ಪರಿಹಾರ ನೀಡಿ ಬ್ರಿಜ್‌ ಕಂ ಬ್ಯಾರೇಜ್‌ಗೆ ಗೇಟ್ ಅಳವಡಿಸಿ ನೀರು ಸಂಗ್ರಹವಾಗುವಂತೆ ಮಾಡಿ, ರೈತರಿಗೆ ನೀರಾವರಿ ಮಾಡಲು ಒತ್ತು ಕೊಡಬೇಕು” ಎಂದು ಒತ್ತಾಯಿಸಬೇಕು.

Advertisements

“ಕಬ್ಬು ಬೆಳೆಗಾರರ 2022 ಮತ್ತು 2023ರ ಸಾಲಿನ ಕಬ್ಬು ಕಟಾವು ಮಾಡಿದ ಕಬ್ಬಿನ ಬಾಕಿಹಣವನ್ನು ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ(ಎಫ್‌ಆರ್‌ಪಿ) ಪ್ರಕಾರ ಬಾಕಿಹಣ ಬಿಡುಗಡೆ ಮಾಡದೆ ರೈತರಿಗೆ ದ್ರೋಹ ಬಗೆದಿದೆ. ರೇಣುಕಾ ಶುಗರ್ಸ್ ಹಾವಳಗಾ ಸಕ್ಕರೆ ಕಾರ್ಖಾನೆ ಪ್ರತಿ ರೈತರಿಂದ ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ಪ್ರಕಾರ ₹112 ಬಾಕಿ ಉಳಿಸಿಕೊಂಡ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ಅನ್ಯಾಯ ಮಾಡಿದೆ” ಎಂದು ಆರೋಪಿಸಿದರು.

“ಅಫಜಲಪುರ ತಾಲೂಕಿನ ಚಿಮಣಗೆರಾ ಸಕ್ಕರೆ ಕಾರ್ಖಾನೆಯು 2022 ಮತ್ತು 2023ನೇ ಸಾಲಿನಲ್ಲಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹162 ಬಾಕಿಹಣ ಉಳಿಸಿಕೊಂಡಿದ್ದು, ಕಬ್ಬು ಬೆಳೆಗಾರರ ಬೆನ್ನಿಗೆ ಚೂರಿ ಹಾಕಿದೆ” ಎಂದರು.

“ರೇಣುಕಾ ಶುಗರ್ಸ್ ಹಾವಳಗಾ ಒಟ್ಟು 23,000 ಮಂದಿ ರೈತರ 10 ಲಕ್ಷ ಟನ್ ಕಬ್ಬಿಗೆ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ಪ್ರಕಾರ ಪ್ರತಿ ಟನ್ ಕಬ್ಬಿಗೆ ₹112ರಂತೆ ಒಟ್ಟು ₹11,20,00,000 ಕಬ್ಬಿನ ಬಾಕಿಹಣ ಕೊಡಬೇಕು. ಕೆಆರ್‌ಪಿ ಚಿಣಮಗೆರಾ ಸಕ್ಕರೆ ಕಾರ್ಖಾನೆಯಲ್ಲಿ ಎಫ್‌ಆರ್‌ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ₹162ರಂತೆ ಒಟ್ಟು 25,000 ಮಂದಿ ರೈತರ 11 ಲಕ್ಷ ಟನ್ ಕಬ್ಬಿನ ಬಾಕಿಹಣ ₹17,82,00,000 ಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಫರ್ ಝೋನ್ ವ್ಯಾಪ್ತಿಯಲ್ಲಿ ರೆಸಾರ್ಟ್; ನೈಜ ಹೋರಾಟಗಾರರ ವೇದಿಕೆಯಿಂದ ಜಿಲ್ಲಾಧಿಕಾರಿಗೆ ದೂರು

ಕಬ್ಬು ಬೆಳೆಗಾರರ ಬಾಕಿಹಣವನ್ನು ನೀಡುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ
ಕೆಆರ್‌ಪಿ ಚಿಣಮಗೆರಾ ಸಕ್ಕರೆ ಕಾರ್ಖಾನೆ, ರೇಣುಕಾ ಶುಗರ್ಸ್ ಹಾವಳಗಾ ಕಾರ್ಖಾನೆಗಳ ಮಾಲೀಕರು ಮತ್ತು ರೈತರನ್ನು ಕರೆಯಿಸಿ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಸಿ ಮುಂಗಾರು ಅಧಿವೇಶನ ಕ್ಯಾಂಪ್ ಚರ್ಚಿಸಿ ರೈತರ ಬಾಕಿರುವ ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಶರಣಬಸಪ್ಪಾ ಮಮಶೆಟ್ಟಿ, ಸಿದ್ದರಾಮ ಎಸ್ ದಣ್ಣೂರ, ಅಶೋಕ ಹೂಗಾರ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷರು, ಅಧ್ಯಕ್ಷರು, ಜಲ ಸಮಿತಿ ಒಕ್ಕೂಟ ಕಾರ್ಯದರ್ಶಿಗಳು ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X