ಕಲಬುರಗಿ | ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಮರೀಚಿಕೆ: ಶಿವಕುಮಾರ ಗೋಲಾ

Date:

Advertisements

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಆರೋಪ ಮಾಡಿದರು.

ಗ್ರಾಮದ ಹಿಂದುಳಿದ ವರ್ಗ(ಬಿಸಿಎಂ)ಗಳ ಬಾಲಕರ ವಸತಿ ನಿಲಯದಲ್ಲಿ ಸುಮಾರು ಐವತ್ತು(50) ವಿದ್ಯಾರ್ಥಿಗಳಿದ್ದು, ಮೂಲ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮಲಗುವುದಕ್ಕೆ ಮಂಚ, ಬೆಡ್ ವ್ಯವಸ್ಥೆ ಕಲ್ಪಪಿಸಿಕೂಟ್ಟಿಲ್ಲ. ಅಲ್ಲದೆ ವಸತಿ ನಿಲಯದ ಕಿಟಕಿ ಬಾಗಿಲುಗಳು ಮುರಿದು ಬಿದ್ದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಸಿಎಂ ಹಾಸ್ಟೆಲ್‌

ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಾಂಪೌಂಡ್ ಗೋಡೆ ಇಲ್ಲದಿರುವುದರಿಂದ ಸಾರ್ವಜನಿಕರು ಗುಟಕಾ, ವಿಮಲ್ ತಿಂದು ಉಗುಳಿರುವುದರಿಂದ ನಿಲಯದ ಗೋಡೆಗಳು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿವೆ. ಸರಿಯಾದ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದರು.

Advertisements
ಬಿಸಿಎಂ ಹಾಸ್ಟೆಲ್‌ 1

“ವಿದ್ಯಾರ್ಥಿಗಳ ಸಮಸ್ಯೆ ಒಂದು ಕಡೆಯಾದರೆ, ಮೇಲ್ವಿಚಾರಕರು ಆರು(6) ತಿಂಗಳಿಗಳಿಗೊಮ್ಮೆ ವರ್ಗಾವಣೆಯಾಗುತ್ತಾರೆ. ಮೇಲ್ವಿಚಾರಕರು ಯಾರು ಎಂಬುದೇ ತಿಳಿಯುವುದಿಲ್ಲ. ಅಲ್ಲದೆ ಹಾಸ್ಟೆಲ್ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಯಾರೂ ಮಾಡು‌ತ್ತಿಲ್ಲ. ಒಬ್ಬರು ವಾರ್ಡನ್, ಇಬ್ಬರು ಕೂಲಿ ಆಳುಗಳ ಮುಖಾಂತರ ಕೆಲಸ ಮಾಡಿಸಲಾಗುತ್ತಿದೆ. ಅವರೂ ಕೂಡ ಸರಿಯಾಗಿ ಕೆಲಸ ಮಾಡುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಭಿವ್ಯಕ್ತಿಗೆ ಪೂರಕವಾದ ವಾತಾವರಣ ನಿರ್ಮಿಸುವುದೇ ಸ್ವಾತಂತ್ರ್ಯ: ಕೆ ವಿ ನಾಗರಾಜಮೂರ್ತಿ

“ಆಂದೋಲಾ ಜಿಲ್ಲಾ ಪಂಚಾಯತ್ ಕ್ಷೇತ್ರವಾಗಿದೆ. ಬಿಸಿಎಂ ವಸತಿ ನಿಲಯ ಈ ವ್ಯಾಪ್ತಿಗೆ ಸೇರಿದರೂ ಅಧಿಕಾರಿಗಳು ನಿಷ್ಕಾಳಜಿ ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ, ತಾಲೂಕು ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ದಲಿತ ಸೇನೆ ಸಂಘಟನೆಯಿಂದ ಹಿಂದುಳಿದ ವರ್ಗಗಳ ಕಚೇರಿ ಎದುರು ತೀವ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X