ರೈತ, ಕಾರ್ಮಿಕರ ಹೋರಾಟಗಾರ ದಿವಂಗತ ಮಾರುತಿ ಮಾನಪಡೆ ಅವರ 70ನೇ ಜನ್ಮದಿನದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧೆಡೆ ಹಲವು ಅವರ ಅಭಿಮಾನಿಗಳ ಬಳಗ, ನೀರು ಸರಬರಾಜು ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘಟನೆಗಳ ನೇತೃತ್ವದಲ್ಲಿ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದರು.
ಅಂಬಲಗಾ ಗ್ರಾಮದ ಅವರ ಸಮಾಧಿ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಮಲಾಪುರ ಕಸಾಪ ಅಧ್ಯಕ್ಷ ಸುರೇಶ ಲೇಂಗಟಿ ಹಾಗೂ ಭೀಮಶಾ ದಂಡಗುಲಕರ್, ಬಸವರಾಜ ಸರಡಗಿ, ಸೋಮಶೇಖರ್ ಸಿಂಗೆ ಬಂಡಯ್ಯ ಸ್ವಾಮಿ ಇತರರು ಭಾಗವಹಿಸಿದ್ದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್ ಜಿ.ಶಟಗಾರ, ಜಿಲ್ಲಾ ರೈತ ಕಾರ್ಮಿಕ ಸಂಘದ ಮುಖಂಡ ಚಂದು ಜಾಧವ, ನಾರಾಯಣ ರಂಗದಾಳ, ನಾಗರಾಜ ಗೋಗಿ, ಅನಿಲ ಮಂಗಾ, ಥಾವರು ರಾಠೋಡ , ಸಮೀರ್ ಪಾಷಾ ಇತರರು ಇದ್ದರು.
ಘಾಟಗೆ ಲೇ ಔಟ್ ಶಿವಾಜಿ ಪಾರ್ಕ್ ಬಳಿಯಿರುವ ವೃದ್ಧಾಶ್ರಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ರೈತ ಕಾರ್ಮಿಕ ಸಂಘದ ಗೌರವ ಅಧ್ಯಕ್ಷ ಶಾಂತಪ್ಪ ಪಾಟೀಲ, ರಾಘವೇಂದ್ರ ಅವರಾದಕರ್, ಪ್ರಕಾಶ ಬಬಲಾದ ಶಿವಕುಮಾರ್ ಮರತುರಕರ್, ಇದ್ದರು.
ನೃಪತುಂಗ ಕಾಲೋನಿ ಬಳಿಯಿರುವ ಬುಡ್ಗ ಜಂಗಮ ಕಾಲೋನಿಯಲ್ಲಿ ಸುಮಾರು 400 ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸಾಹಿತಿ, ಪತ್ರಕರ್ತ ಡಾ. ಶಿವರಂಜನ್ ಸತ್ಯಂಪೇಟೆ, ಮಕ್ಕಳ ಹಕ್ಕುಗಳ ಹೋರಾಟಗಾರ ವಿಠ್ಠಲ ಚಿಕಣಿ, ಪತ್ರಕರ್ತ ಚಂದ್ರಶೇಖರ ಕವಲಗಾ, ಸುಂದರ ರಾಷ್ಟ್ರ ಪ್ರತಿಷ್ಠಾನದ ಸಂಜುಕುಮಾರ್ ಕಾಂಬಳೆ, ಸಾಮಾಜಿಕ ಕಾರ್ಯಕರ್ತ ಮೈಲಾರಿ ದೊಡ್ಡಮನಿ, ಮಹೇಶ ಚೌಕಿಮಠ, ಪುಂಡಲೀಕ ಮೋಸಲಗಿ ಇತರರಿದ್ದರು.
ಕಮಲಾಪುರ ತಾಲೂಕ ಕೇಂದ್ರದಲ್ಲಿ ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ ರೇವಪ್ಪ ಓಕಳಿ, ದುರ್ಗಪ್ಪ ಚೇಂಗಟಾ, ಸುಭಾಷ ಹೊಸಮನಿ , ಚಿದಾನಂದ ಸೋಂತ, ರಮೇಶ ರಾಠೋಡ, ಸೋಮಶೇಖರ್, ಸುನೀಲ್ ಮಾನ್ಪಡೆ ಇತರರಿದ್ದರು.