ಕಲಬುರಗಿ | ಮಾರುತಿ ಮಾನಪಡೆ 70ನೇ ಜನ್ಮದಿನ : ನೋಟ್‌ಬುಕ್, ಪೆನ್ ವಿತರಣೆ

Date:

Advertisements

ರೈತ, ಕಾರ್ಮಿಕರ ಹೋರಾಟಗಾರ ದಿವಂಗತ ಮಾರುತಿ ಮಾನಪಡೆ ಅವರ 70ನೇ ಜನ್ಮದಿನದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧೆಡೆ ಹಲವು ಅವರ ಅಭಿಮಾನಿಗಳ ಬಳಗ, ನೀರು ಸರಬರಾಜು ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘಟನೆಗಳ ನೇತೃತ್ವದಲ್ಲಿ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದರು.

ಅಂಬಲಗಾ ಗ್ರಾಮದ ಅವರ ಸಮಾಧಿ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಮಲಾಪುರ ಕಸಾಪ ಅಧ್ಯಕ್ಷ ಸುರೇಶ ಲೇಂಗಟಿ ಹಾಗೂ ಭೀಮಶಾ ದಂಡಗುಲಕರ್, ಬಸವರಾಜ ಸರಡಗಿ, ಸೋಮಶೇಖರ್ ಸಿಂಗೆ ಬಂಡಯ್ಯ ಸ್ವಾಮಿ ಇತರರು ಭಾಗವಹಿಸಿದ್ದರು.

ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್ ಜಿ.ಶಟಗಾರ, ಜಿಲ್ಲಾ ರೈತ ಕಾರ್ಮಿಕ ಸಂಘದ ಮುಖಂಡ ಚಂದು ಜಾಧವ, ನಾರಾಯಣ ರಂಗದಾಳ, ನಾಗರಾಜ ಗೋಗಿ, ಅನಿಲ ಮಂಗಾ, ಥಾವರು ರಾಠೋಡ , ಸಮೀರ್ ಪಾಷಾ ಇತರರು ಇದ್ದರು.

Advertisements

ಘಾಟಗೆ ಲೇ ಔಟ್ ಶಿವಾಜಿ ಪಾರ್ಕ್ ಬಳಿಯಿರುವ ವೃದ್ಧಾಶ್ರಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ರೈತ ಕಾರ್ಮಿಕ ಸಂಘದ ಗೌರವ ಅಧ್ಯಕ್ಷ ಶಾಂತಪ್ಪ ಪಾಟೀಲ, ರಾಘವೇಂದ್ರ ಅವರಾದಕರ್, ಪ್ರಕಾಶ ಬಬಲಾದ ಶಿವಕುಮಾರ್ ಮರತುರಕರ್, ಇದ್ದರು.

ನೃಪತುಂಗ ಕಾಲೋನಿ ಬಳಿಯಿರುವ ಬುಡ್ಗ ಜಂಗಮ ಕಾಲೋನಿಯಲ್ಲಿ ಸುಮಾರು 400 ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಾಹಿತಿ, ಪತ್ರಕರ್ತ ಡಾ.‌ ಶಿವರಂಜನ್ ಸತ್ಯಂಪೇಟೆ, ಮಕ್ಕಳ ಹಕ್ಕುಗಳ ಹೋರಾಟಗಾರ ವಿಠ್ಠಲ ಚಿಕಣಿ, ಪತ್ರಕರ್ತ ಚಂದ್ರಶೇಖರ ಕವಲಗಾ, ಸುಂದರ ರಾಷ್ಟ್ರ ಪ್ರತಿಷ್ಠಾನದ ಸಂಜುಕುಮಾರ್ ಕಾಂಬಳೆ, ಸಾಮಾಜಿಕ ಕಾರ್ಯಕರ್ತ ಮೈಲಾರಿ ದೊಡ್ಡಮನಿ, ಮಹೇಶ ಚೌಕಿಮಠ, ಪುಂಡಲೀಕ ಮೋಸಲಗಿ ಇತರರಿದ್ದರು.

ಕಮಲಾಪುರ ತಾಲೂಕ ಕೇಂದ್ರದಲ್ಲಿ ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ ರೇವಪ್ಪ ಓಕಳಿ, ದುರ್ಗಪ್ಪ ಚೇಂಗಟಾ, ಸುಭಾಷ ಹೊಸಮನಿ , ಚಿದಾನಂದ ಸೋಂತ, ರಮೇಶ ರಾಠೋಡ, ಸೋಮಶೇಖರ್, ಸುನೀಲ್ ಮಾನ್ಪಡೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X