ಕಲಬುರಗಿ | ಅನುದಾನ ಅವ್ಯವಹಾರದ ಬಗ್ಗೆ ಅಂಬೇಡ್ಕರ್ ಯುವ ಸೇನೆಯಿಂದ ದೂರು: ಗ್ರಾ.ಪಂ ಪಿಡಿಒ ಅಮಾನತು

Date:

Advertisements

ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷರಾದ ರವೀಂದ್ರ ನಾಟೆಕರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಅನುದಾನದ ಹಣದಲ್ಲಿ ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹರವಾಳ ಗ್ರಾ.ಪಂ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.

ಜೇವರ್ಗಿ ತಾಲೂಕು ಹರವಾಳ ಗ್ರಾ.ಪಂ ಹಿಂದಿನ‌ ಪಿಡಿಒ ಗಂಗಾಧರ್ ರವರು 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿ ಭಾರೀ ಅವ್ಯವಹಾರ ಮಾಡಿರುತ್ತಾರೆಂದು ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷ ರವೀಂದ್ರ ನಾಟೆಕರ್ ಅವರು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

15ನೇ ಹಣಕಾಸು ಯೋಜನೆಯಲ್ಲಿ ಭಾರೀ ಅವ್ಯವಹಾರ ಮಾಡಿದ್ದು, ಕಾಮಗಾರಿಯನ್ನು ಕೈಗೊಳ್ಳದೆ ರಶೀದಿ ಸೃಷ್ಟಿ ಮಾಡಿ ಅನುದಾನ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ದೂರಿನ ತನಿಖೆ ಕೈಗೊಂಡ ಅಧಿಕಾರಿಗಳು, ಪಿಡಿಒ ಬಳಿ ದೂರಿನ ಕುರಿತು ವಿಚಾರಿಸಿದರೆ ಬೇರೆ ಬೇರೆ ನೆಪವೊಡ್ಡಿ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದರು.

Advertisements
1001783609

ನಂತರ ದೂರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು. ಅನೇಕ ಬಾರಿ ದಾಖಲೆ ಸಲ್ಲಿಸುವಂತೆ ತಿಳಿಸಿದ್ದರೂ ಕೂಡ ತನಿಖಾಧಿಕಾರಿಗಳಿಗೆ ಸ್ಪಂದಿಸಿರುವುದಿಲ್ಲ.
ದಾಖಲೆ ಸಲ್ಲಿಸಲು ಹಿಂಜರಿಯುತ್ತಿದ್ದ ಪಿಡಿಒ ಗಂಗಾಧರ್ ಕಾಮಗಾರಿಯನ್ನು ಕೈಗೊಳ್ಳದೆ ಹಾಗೂ ಪರಿಕರಗಳನ್ನು ಖರೀದಿಸದೆ ರಶೀದಿ ಸೃಷ್ಟಿ ಮಾಡಿ ಭಾರೀ ಅವ್ಯವಹಾರ ಮಾಡಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರೇವಣಸಿದ್ಧ ರವರು ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸಿದ್ದರು.

ಕಾರ್ಯನಿರ್ವಾಹಕ ಅಧಿಕಾರಿಗಳ ವರದಿ ಆಧರಿಸಿ ಜಿಲ್ಲಾ ಪಂಚಾಯತ್ ಕಲಬುರಗಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವಾರ ಸಿಂಗ್ ಮೀನಾ ರವರು ಹರವಾಳ ಪಿಡಿಒ ಗಂಗಾಧರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ: ಮಿಲಿಂದ್ ಸಾಗರ್,
ಸಿಟಿಜನ್ ಜರ್ನಲಿಸ್ಟ್

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X