ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಒತ್ತಾಯ

Date:

Advertisements

ಹತ್ತಾರು ವರ್ಷಗಳವರೆಗೆ ದುಡಿಸಿಕೊಂಡು ಸೂಕ್ತ ವೇತನ ನೀಡದೇ ಅನ್ಯಾಯ ಮಾಡಿದ್ದಲ್ಲದೇ, ಕೆಲಸ ಕಾಯಂ ಮಾಡುವ ವೇಳೆ ಅಕ್ರಮ ಎಸಗಿ ಪ್ರಾಮಾಣಿಕವಾಗಿ ದುಡಿದವರು ಬೀದಿಗೆ ಬರುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜೇವರ್ಗಿ ತಾಲ್ಲೂಕು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಹೇಶಕುಮಾರ ರಾಠೋಡ ಆಗ್ರಹಿಸಿದರು.

ಜೇವರ್ಗಿ ಪಟ್ಟಣದ ಪುರಸಭೆ ಕಚೇರಿಯ ಎದುರು ನಡೆಯುತ್ತಿರುವ ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ʼಖಾಲಿಯಿರುವ 17 ಪೌರಕಾರ್ಮಿಕರ ಹುದ್ದೆಗಳಿಗೆ ಹಿಂದೆ ಜೇವರ್ಗಿ ಪುರಸಭೆಯಲ್ಲಿ ಕೆಲಸ ಮಾಡಿದ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಈವರೆಗೆ ಕೆಲಸ ಮಾಡಿದ ವೇತನ ಪಾವತಿಸಬೇಕು. ದಲಿತರು ಬದುಕುವ ಹಕ್ಕನ್ನು ಅಧಿಕಾರಿಗಳು ಕಸಿಯುವಂತಹ ದೌರ್ಜನ್ಯ ಎಸಗಿದ್ದು, ಇಂತಹ ಅನ್ಯಾಯ, ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ. ಕೂಡಲೇ ಪೌರಕಾರ್ಮಿಕರಿಗೆ ನ್ಯಾಯ ಸಿಗಬೇಕುʼ ಎಂದು ಒತ್ತಾಯಿಸಿದರು.

Advertisements

ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷೆ ಶಂಕುಬಾಯಿ, ಷಣ್ಮುಖಮ್ಮ ಮತ್ತು ಕಾರ್ಯದರ್ಶಿ ರಾಘವೇಂದ್ರ ಮಾತನಾಡಿ, ʼನಾವು ಅಧಿಕಾರಿಗಳ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿದ್ದೇವೆ. ವೇತನ ದೊರೆಯಲಿ, ದೊರೆಯದೇ ಇರಲಿ.. ನಿಷ್ಠೆಯಿಂದ ಕೆಲಸ ಮಾಡಿದ್ದೇವೆ. ಆದರೆ ಅಧಿಕಾರಿಗಳು ಕೆಲಸ ಕಾಯಂಗೊಳಿಸುತ್ತೇವೆ ಎಂದು ಭರವಸೆ ನೀಡಿ, ಮೋಸ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ. ಶಾಸಕರು ಹಲವು ಬಾರಿ ಭರವಸೆ ನೀಡಿದ್ದರೂ, ನಮಗೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಹೀಗಾಗಿ ಪಟ್ಟಣಕ್ಕೆ ಬರುತ್ತಿರುವ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಯುವಜನರಿಗೆ ನಿರಾಸೆ ಮೂಡಿಸಿದ ರಾಜ್ಯ ಬಜೆಟ್ : ಡಿವೈಎಫ್‌ಐ

ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ಬಾಬು ಕೆ. ಮುಲ್ಲಾ, ಎಐಟಿಯುಸಿ ತಾಲ್ಲೂಕು ಕಾರ್ಯದರ್ಶಿ ಅಶೋಕ ಸಾಸಾನೂರ, ಉಗಾರ ಶುಗರ್ ಕಾರ್ಮಿಕರ ಸಂಘದ ಕಾರ್ಯದರ್ಶಿ ವಿಜಯಕುಮಾರ, ಮಡಿವಾಳಪ್ಪ, ನಿತ್ಯಾನಂದ ಹಿರೇಮಠ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಅಬ್ದುಲ್ ರಶೀದ, ಶಬ್ಬೀರ ಮಡಕಿ, ಸಕ್ರೆಪ್ಪ ಪೂಜಾರಿ, ನಾಗರಾಜ ಮತ್ತು 17 ಪೌರಕಾರ್ಮಿಕರು ಅವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X