ಕಲಬುರಗಿ | ಶ್ರೀಗಂಧ ಬೆಳೆಯಲು ಹೊಸ ನೀತಿ: ಸಚಿವ ಈಶ್ವರ್ ಖಂಡ್ರೆ

Date:

ರೈತರು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

- Advertisement -

ಕಲಬುರಗಿ ನಗರದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರನ್ನು ರೈತರು ಹಾಗೂ ಶ್ರೀಗಂಧ ಬೆಳೆಗಾರರು ಭೇಟಿ ಮಾಡಿ ಮನವಿ ಸಲ್ಲಿಸಿದ ವೇಳೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಶ್ರೀಗಂಧ ಬೆಳೆಯಲು ಇರುವ ತೊಡಕುಗಳನ್ನು ಕೂಡಲೇ ಸರಳೀಕರಣ ಗೊಳಿಸುವ ನಿಟ್ಟಿನಲ್ಲಿ ಸಭೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ಗೊಳಿಸಲಾಗುವುದು” ಎಂದರು.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ವಿಸ್ತರಣೆಗೆ ಬೇಕಾದ ಅನುದಾನವನ್ನು ಶೀಘ್ರದಲ್ಲೇ ನೀಡಲಾಗುವುದು. ಅಲ್ಲದೆ, ಖಾಲಿ ಇರುವ ಹುದ್ದೆಗಳನ್ನೂ ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸಸಿಗಳನ್ನು ಮರಗಳನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ್ದು, ಪ್ರೋತ್ಸಾಹ ಧನ ಯೋಜನೆಯಲ್ಲಿ ರೈತರಿಗೆ ನೀಡಲಾಗುತ್ತಿರುವ ಸಸಿಗಳು ಎಷ್ಟು ಪ್ರಮಾಣದಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ಕೇಳಿದಾಗ, ಅಧಿಕಾರಿಗಳು ಶೇ. 80ರಷ್ಟು ಉಳಿದಿದೆ” ಎಂದು ಹೇಳಿದರು.

“ಮಲೆನಾಡಿನಲ್ಲೇ ಶೇ.70 ಹಾಗೂ 60ರಷ್ಟು ಉಳಿಯುವಾಗ ಬಿಸಿಲುನಾಡಾದ ಕಲ್ಯಾಣದಲ್ಲಿ ಶೇ.80ರಷ್ಟು ಉಳಿಯಲು ಹೇಗೆ ಸಾಧ್ಯ. ಈ ಕುರಿತು ಸರಿಯಾಗಿ ಪರೀಕ್ಷೆ ಮಾಡಿ ತಿಳಿಸಿ” ಎಂದು ಸಚಿವರು ಸೂಚಿಸಿದರು.

“ನರ್ಸರಿ ಬೆಳೆಯುವ ಪ್ರಮಾಣವನ್ನು ಹೆಚ್ಚಿಸುವುದು ಮತ್ತು ಉದ್ಯಾನ ನಿರ್ಮಾಣ ಹಾಗೂ ಪ್ರವಾಸಿ ತಾಣಗಳನ್ನಾಗಿ ಪರಿವರ್ತನೆ ಮಾಡುವಂತಹ ಕೆಲವು ವಿಶೇಷ ಸ್ಥಳಗಳ ಬಗ್ಗೆ ಮಾಹಿತಿ ನೀಡಬೇಕು. ದೈವಿ ವನದ ಕುರಿತು ಹೆಚ್ಚು ಮುತುವರ್ಜಿ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

“ರಾಜ್ಯದಲ್ಲಿ ಸಾಮಾಜಿಕ ಅರಣ್ಯವನ್ನು ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಐದು ಕೋಟಿ ಸಸಿಗಳನ್ನು ನೆಡುವ ಉದ್ದೇಶ ಸಾಫಲ್ಯ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಯಚೂರು, ಯಾದಗಿರಿ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...