ಕಲಬುರಗಿ | ದುಡಿಯುವ ಕೈಗಳಿಗಿಲ್ಲ ವೇತನ; ಸಿದ್ದು ಕೇರೂರ ಕಿಡಿ

Date:

Advertisements

ಪೌರಕಾರ್ಮಿಕರು ಮುಂಜಾನೆಯೇ ಎದ್ದು, ರಸ್ತೆಗಳ ಕಸ-ಕಡ್ಡಿ ಗುಡಿಸಿ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ, ದುಡಿಯುವ ಅವರಿಗೆ ವೇತನವೇ ದೊರೆಯುತ್ತಿಲ್ಲ. ಸುರಕ್ಷಾ ಸಲಕರಣೆಗಳನ್ನೂ ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಸಿದ್ದು ಕೇರೂರ್ ಕಿಡಿಕಾರಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಸುಮಾರು ಒಂದು, ಒಂದೂವರೆ ವರ್ಷಗಳಿಂದ ವೇತನ ನೀಡಲಾಗಿಲ್ಲ. ಬಾಕಿ ವೇತನವನ್ನು ನೀಡಬೇಕು ಮತ್ತು ಇಪಿಎಫ್‌, ಇಎಸ್‌ಐಅನ್ನು ಪಾವತಿಸಬೇಕೆಂದು ಒತ್ತಾಯಿಸಿ ನೌಕರರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಸತ್ಯಾಗ್ರಹವನ್ನು ಬೆಂಬಲಿಸಿ ಅವರು ಮಾತನಾಡಿದರು. “ನಗರವನ್ನು ಸ್ವಚ್ಛಗೊಳಿಸುವ ನೌಕರರ ವೇತನವನ್ನು ಕಸಿದುಕೊಳ್ಳಬಾರದು. ಅವರಿಗೆ ಸುರಕ್ಷತಾ ಕವಚವನ್ನು ಕೊಡದೆ ಅಮಾನುಷವಾಗಿ ದುಡಿಸಿಕೊಳ್ಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಪ್ರತಿಭಟನೆಯಲ್ಲಿ ದಲಿತ ಹಿರಿಯ ಮುಖಂಡ ಚಂದ್ರಶೇಖರ್ ಹರನಾಳ, ಮಲ್ಲಣ್ಣ ಕೊಡಚಿ, ಸಿದ್ದರಾಮ ಕಟ್ಟಿ, ಮದನ್ ಗುಡೂರ್, ಅಬ್ದುಲ್ ಗನಿ, ವಿಶ್ವರಾಧ್ಯ ಗೋಪಾಲ್ಕರ್, ಬಸವರಾಜ್ ಇಂಗಳಗಿ, ಮಲ್ಲಿಕಾರ್ಜುನ ಕೆಲ್ಲೂರ, ರಾಜು ಆಂದೋಲ ಹಾಗೂ ನೌಕರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X