ಕಲಬುರಗಿ | ನ.2: ಎಸ್‌ಐಓ ಸಂಘಟನೆಯಿಂದ ವಿದ್ಯಾರ್ಥಿ-ಯುವಜನರ ಸಮ್ಮೇಳನ; ಸಾರ್ವಜನಿಕ ಸಮಾವೇಶ

Date:

Advertisements

ಐತಿಹಾಸಿಕ ನಗರಿ ಮತ್ತು ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಕಲಬುರಗಿ ನಗರದಲ್ಲಿ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಜೇಷನ್(ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ “ರಾಜ್ಯ ಸದಸ್ಯರ ಸಮ್ಮೇಳನದ ಭಾಗವಾಗಿ ನವೆಂಬರ್ 2ನೇ ತಾರೀಕಿನಂದು ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಓ ಗುಲ್ಬರ್ಗಾ ನಗರ ಘಟಕದ ಅಧ್ಯಕ್ಷರಾದ ಸುಫಿಯಾನ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ರಾಜ್ಯ ಸದಸ್ಯರ ಸಮ್ಮೇಳನವು ನವೆಂಬರ್ 1, 2 ಮತ್ತು 3ನೇ ತಾರೀಕಿನಂದು ಮೂರು ದಿನಗಳ ಕಾಲ “ಓದು, ಪ್ರತಿರೋಧ ಹಾಗೂ ಪುನಶ್ಚೇತನ” ಎಂಬ ಘೋಷ್ಯ ವಾಕ್ಯದಡಿ ನಡೆಯಲಿದೆ. ಇದರ ಎರಡನೇ ದಿನವಾದ ಶನಿವಾರ ನವೆಂಬರ್ 2ನೇ ತಾರೀಖಿನಂದು ಸಂಜೆ 6 ಗಂಟೆಗೆ ಕಲಬುರಗಿ ಮೊಘಲ್ ಗಾರ್ಡನ್‌ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಾರ್ವಜನಿಕ ಸಮಾವೇಶಕ್ಕೆ ಮುಖ್ಯ ಅತಿಥಿಯಾಗಿ ಜಮಾಅತೆ ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಅಧ್ಯಕ್ಷರಾದ ಸೈಯ್ಯದ್ ಸಾದತುಲ್ಲಾಹ್ ಹುಸೇನಿಯವರು ದೆಹಲಿಯಿಂದ ಆಗಮಿಸಲಿದ್ದಾರೆ. ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ರವರು ಅತಿಥಿಯಾಗಿ ಭಾಗವಹಿಸಲಿದ್ದಾರೆ, ಇದರೊಂದಿಗೆ ಜಮಾಅತ್ ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಕಾರ್ಯದರ್ಶಿ ಎಸ್ ಅಮೀನುಲ್ ಹಸನ್, ಎಸ್.ಐ.ಓ ಕರ್ನಾಟಕ ರಾಜ್ಯಾಧ್ಯಕ್ಷರಾದ ಝೀಶಾನ್ ಅಖಿಲ್ ಸಿದ್ದೀಕಿ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ನ ಗುಲ್ಬರ್ಗಾ ಇದರ ಸ್ಥಾನೀಯ ಅಧ್ಯಕ್ಷರಾದ ಝಾಕೀರ್ ಹುಸೇನ್ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ನಗರದ ಎಲ್ಲ ಧರ್ಮೀಯ ವಿದ್ಯಾರ್ಥಿಗಳು, ಯುವಜನರು, ಹಾಗೂ ಹಿರಿಯ ನಾಗರಿಕರು “ಓದು, ಪ್ರತಿರೋಧ ಮತ್ತು ಪುನಶ್ಚೇತನ” ಎಂಬ ವಿಷಯದಲ್ಲಿ ನಡೆಯುವ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಗುಲ್ಬರ್ಗಾ ನಗರ ಘಟಕದ ಅಧ್ಯಕ್ಷರಾದ ಸುಫಿಯಾನ್ ವಿನಂತಿಸಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X