ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Date:

Advertisements

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ‌.

ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್ ನೆರವಿನಿಂದ ಕಲಬುರಗಿ ನಗರದ ಸೆನ್ ಪೊಲೀಸರು ಮೂವತ್ತೆಂಟು ಲಕ್ಷ ಮೌಲ್ಯದ 672 ಮೊಬೈಲ್​ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ಒಪ್ಪಿಸಿದ್ದಾರೆ.

ಕಲಬುರಗಿ ನಗರದ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕಳವು, ಸುಲಿಗೆ ಹಾಗೂ ಕಳೆದುಕೊಂಡಿರುವ ಮೊಬೈಲ್​ಗಳನ್ನು ಹುಡುಕಿಕೊಡುವಂತೆ ವಾರಸುದಾರರು ಸಿಇಐಆರ್ ವೆಬ್ ಪೋರ್ಟಲ್​ನಲ್ಲಿ ನೋಂದಾಯಿಸಿದ್ದರು.

Advertisements

ಸಿಇಐಆರ್ ಪೋರ್ಟಲ್ ಕರ್ತವ್ಯ ನಿರ್ವಹಿಸುವ ತಾಂತ್ರಿಕ ಸಿಬ್ಬಂದಿಗಳ ಕಾರ್ಯಕ್ಷಮತೆಯಿಂದ ಮೂವತ್ತೆಂಟು ಲಕ್ಷ ಮೌಲ್ಯದ 672 ಮೊಬೈಲ್​ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸೆನ್ ಠಾಣೆ ಸಿಬಂದಿಗಳ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಢಗೆ ಅವರು ಶ್ಲಾಘನೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ಈ ವೇಳೆ ಕಮಿಷನರ್ ಶರಣಪ್ಪ ಢಗೆ ಮಾತನಾಡಿ, “ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ ಲ್ಯಾಪ್ಟಾಪ್ ಅಥವಾ ಯಾವುದಾದರೂ ದಾಖಲಾತಿಗಳು ಕಳೆದುಹೋದಲ್ಲಿ ಅಥವಾ ಯಾರಾದರೂ ಕಳ್ಳತನ ಮಾಡಿದಲ್ಲಿ ಸ್ಥಳಿಯ ಪೋಲಿಸ್ ಠಾಣೆಗೆ ದೂರು ದಾಖಲಿಸಬಹುದು ಅಥವಾ ಕೆ ಎಸ್ ಪಿ ಇ-ಲೊಸ್ಟ್ ಮತ್ತು ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ತಮ್ಮ ಮೊಬೈಲ್’ಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು” ಎಂದು ತಿಳಿಸಿದರು.

ವಾಲೆಂಟಿಯರ್ : ಚನ್ನವೀರ, ಕಲಬುರಗಿ

WhatsApp Image 2024 10 23 at 6.28.43 PM
WhatsApp Image 2024 10 23 at 6.28.42 PM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X