ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು ರಕ್ಷಿಸುತ್ತದೆ ಎಂದು ನಿವೃತ್ತ ಅಧೀಕ್ಷಕ ಅಭಿಯಂತರ ಮಲ್ಲಿಕಾರ್ಜುನ್ ಎಂಎಸ್ ಹೇಳಿದರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮದಿನದ ಅಂಗವಾಗಿ ಮಹೇಂದ್ರ ಫೌಂಡೇಶನ್ ವತಿಯಿಂದ ಎಂಎಸ್ಕೆ ಮಿಲ್ ಜಿಡಿಎ ಬಡಾವಣೆಯಲ್ಲಿ ಆಯೋಜಿಸಿದ್ದ ಗಿಡ ನೆಡುವ ಹಾಗೂ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಶಿಕ್ಷಣ ಮತ್ತು ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಹೇಂದ್ರ ಫೌಂಡೇಶನ್ ನಡೆಸುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಸಂಕಲ್ಪ ಮಾಡಬೇಕು’ ಎಂದರು.
‘ಕಲ್ಯಾಣ ಕರ್ನಾಟಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಚಂದ್ರಶೇಖರ್ ದೊಡ್ಡಮನಿ ಮಾತನಾಡಿ, ಮಹೇಂದ್ರ ಫೌಂಡೇಶನ್ ಹಲವು ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಜೊತೆಗೆ ಅವರ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರುವುದು ಉತ್ತಮ ಕಾರ್ಯವಾಗಿದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಶರಣಪ್ಪ ನಂದಗಿರಿ ವಹಿಸಿದ್ದರು.
ಇದನ್ನು ಓದಿದ್ದೀರಾ? ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ
ಈ ಸಂದರ್ಭದಲ್ಲಿ ಲಕ್ಷ್ಮಣ್ ಕನಕಟಕರ್, ಶಶಿಕಾಂತ್ ಹೋಳ್ಕರ್, ಈಶ್ವರ್ ಹೊಸಮನಿ, ಡಾ. ಕೃಷ್ಣಮೂರ್ತಿ, ಡಾ. ದೀಪ್ತಿ, ಕಾಶಿನಾಥ್ ಮುಖರ್ಜಿ, ಮಲ್ಲಿಕಾರ್ಜುನ್ ಮದಾನಿ, ಪರಮೇಶ್ವರ್ ಧನ್ನಿ, ಸಿದ್ದಣ್ಣ ಹಾಲಬಾವಿ, ಶರಣಬಸವ ಹೆಗ್ಗಡೆ, ಜ್ಯೋತಿ ದೊಡ್ಡಮನಿ, ಅನಿಲಕುಮಾರ್ ಸುಗಂಧಿ, ಸಂಜೀವ್ ಕುಮಾರ್ ಮೇಲಿನಮನಿ, ಡಾ. ತುಶಿತ್, ಅಶಿತ್ ಹಾಗೂ ಜಗನ್ನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





