ಕಲಬುರಗಿ | ಪಿಎಸ್ಐ ಪರಶುರಾಮ ಪ್ರಕರಣ : ಶಾಸಕರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

Date:

Advertisements

ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ ಚಲವಾದಿಯವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿಯ ಶಾಸಕ ಚನ್ನಾರೆಡ್ಡಿ ಪಾಟಿಲ ತುನ್ನೂರ ಹಾಗೂ ಅವರ ಮಗ ಪಂಪಣ್ಣಗೌಡನನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿ ಕಲಬುರಗಿ ಎರಡು ಸಂಘಟನೆಗಳು ಜಂಟಿಯಾಗಿ ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

WhatsApp Image 2024 08 19 at 11.27.27 PM 1

ಪ್ರತಿಭಟನೆ ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, “ಯಾದಗಿರಿ ನಗರ ಪಿ.ಎಸ್.ಐ ಆದ ಪರಶುರಾಮ ಅವರ ಅನುಮಾನಸ್ಪದ ಸಾವಿನ ಪ್ರಕರಣವನ್ನು ಸಿಬಿಗೆ ವಹಿಸಬೇಕು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟಿಲ ತುನ್ನೂರ ಮತ್ತು ಅವರ ಮಗನಾದ ಪಂಪಣ್ಣಗೌಡ ಇವರನ್ನು ಕೂಡಲೇ ಬಂಧಿಸಬೇಕು. ಪಿ.ಎಸ್.ಐ ಆದ ಪರಶುರಾಮ ಇವರ ಕುಟುಂಬಕ್ಕೆ ಸರ್ಕಾರದಿಂದ 10 ಎಕರೆ ಜಮೀನು ಮಂಜೂರಾತಿ ನೀಡಬೇಕು, ಪಿ.ಎಸ್.ಐ ಕುಟುಂಬಕ್ಕೆ ಸರ್ಕಾರದಿಂದ 5 ಕೋಟಿ ರೂಪಾಯಿ ಪರಿಹಾರವಾಗಿ ಕೊಡಬೇಕು, ಮೃತ ಪಿ.ಎಸ್.ಐ ರವರ ಧರ್ಮಪತ್ನಿಯ ವಿದ್ಯಾರ್ಹತೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಮರಿಯಪ್ಪ ಹಳ್ಳಿ, ಮಲ್ಲಿಕಾರ್ಜುನ ಕ್ರಾಂತಿ, ಮರೆಪ್ಪ ಚಟ್ಟರಕರ್, ಅರ್ಜುನ ಭದ್ರೆ ,ಮರಪ್ಪ ಮೇತ್ರ, ಮಹಾಂತೇಶ ಬಡದಾಳ, ಶಿವಶರಣಪ್ಪ ಕುರ್ನಳ್ಳಿ, ಮಲ್ಲಿಕಾರ್ಜುನ ಖನ್ನಾ, ಜಯಕುಮಾರ ನೂಲಕರ, ಶಿವಕುಮಾರ ಸಂಗನ್, ಉದಯ ಕುಮಾರ ಸಾಗರ, ಸೂರ್ಯಕಾಂತ ಆಜಾದಪೂರ, ರಾಜಕುಮಾರ ನಿಂಬಾಳ, ಸಂತೋಷ ತೇಗನೂರ, ಶಿವಕುಮಾರ ಕೊರಳ್ಳಿ, ಸೈಬಣ್ಣ ಕೋಟನೂರಕರ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2024 08 19 at 11.26.44 PM
WhatsApp Image 2024 08 19 at 11.26.44 PM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X