ಕಲಬುರಗಿ | ಬರಗಾಲ ಪರಿಹಾರಕ್ಕೆ ಆಗ್ರಹಿಸಿ ರೈತಸಂಘ ಜಾಥಾ

Date:

Advertisements

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯಾದ್ಯಂತ ಜಾಥಾ, ಪಾದಯಾತ್ರೆ, ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 11ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ವಿಮೆ ಹಣ ಕಟ್ಟಿದ 1,88,000 ಸಾವಿರ ರೈತರು ಜಿಲ್ಲೆಯಲ್ಲಿದ್ದಾರೆ. ಈ ರೈತರಿಂದ ಹಣ ಜಮಾ ಆಗಿದ್ದು ಒಟ್ಟು 161 ಕೋಟಿ ರೂಪಾಯಿ. ಆದರೆ, ಕೇವಲ 91 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದೆ. ಇನ್ನೂ ಉಳಿದ ಹಣ ಬಿಡುಗಡೆಯಾಗಿಲ್ಲ. ಅ ಹಣವನ್ನೂ ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ದಳ್ಳಾಳಿಗಳ ಮೋಸದಿಂದಾಗಿ ವಿಮೆ ಹಣ ರೈತರ ಖಾತೆಗೆ ಜಮಾ ಆಗದೇ, ಯಾರದ್ದೋ ಖಾತೆಗೆ ಜಮಾ ಆಗಿದೆ. ದಳ್ಳಾರಿಗಳು ರೈತರ ಹಣ ಲೂಟಿ ಮಾಡುತ್ತಿದ್ದಾರೆ. ರೈತರ ಖಾತೆಗೆ ಹಣ ಜಮಾ ಮಾಡುವಲ್ಲಿ ದಳ್ಳಾಳಿಗಳ ಜೊತೆ ಸೇರಿ ಅವ್ಯವಹಾರ ನಡೆಸಿರುವ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕು. ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು. ವಂಚಿತರಾಗಿರುವ ರೈತರ ಖಾತೆಗೆ ವಿಮೆ ಹಣ ಜಮಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ರೈತ ಜಾಥಾದ ಹಕ್ಕೊತ್ತಾಯಗಳು

1) ಕಲಬುರ್ಗಿ ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪಿಡೀತ ಪ್ರದೇಶ ಎಂದು ಘೋಷಿಸಬೇಕು.

2) ಕಲಬುರ್ಗಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟದ ಮೇಲೆ ನಿಯಂತ್ರಣ ಸಾಧಿಸಬೇಕು. ಈಗಾಗಲೆ ಹಳ್ಳಿಗಳಲ್ಲಿ ಕುಡಿಯುವ ನೀರಿನ ಆಹಾಕಾರ ಉಲ್ಬಣಗೊಳ್ಳುತ್ತಿದೆ. ಶುದ್ದವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.

3) ತಕ್ಷಣವೇ ಬಿಪಿಎಲ್ – ಎಪಿಎಲ್ ತಾರತಮ್ಯ ಇಲ್ಲದೇ ಬರಗಾಲ ಪರಿಹಾರವಾಗಿ ಪಡಿತರದಲ್ಲಿ ಹೆಚ್ಚುವರಿ ಆಹಾರ ಧಾನ್ಯ ಒದಗಿಸಬೇಕು. ಆಹಾರ ಧಾನ್ಯಗಳ ಬೆಲೆ ಏರಿಕೆ ಮೇಲೆ ಕಡಿವಾಣ ಹಾಕಬೇಕು.

4) ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಮೇವು ಕುಂದು ಕೊರತೆ ಪರಿಹರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.

5) ಕೂಡಲೇ ಕೇಂದ್ರ ಸರ್ಕಾರವು ಎಲ್ಲ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲ ರೀತಿಯ ಸಾಲ ವಸೂಲಾತಿಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಬೇಕು.

6) ಉದ್ಯೋಗ ಖಾತರಿ ಯೋಜನೆಯ ಕೆಲಸದ ದಿನಗಳನ್ನು 200 ದಿನಕ್ಕೆ ಹೆಚ್ಚಿಸಬೇಕು. ಬರಗಾಲದ ಕೂಲಿಯಾಗಿ 600 ರೂ ಪಾವತಿಸಬೇಕು.

ಸುದ್ದಿಗೋಷ್ಠಿಯಲ್ಲಿ ಶರಣಬಸಪ್ಪ ಮಮಶೆಟ್ಟಿ ಹುರಮುಂಜಿ, ಜಾವೇದ್ ಹುಸೈನ್, ದಿಲೀಪ್ ಕುಮಾರ್, ನಾಗೂರೆ ರಾಯಪ್ಪ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X