ಕಲಬುರಗಿ | ತ್ಯಾಗ-ಸ್ಫೂರ್ತಿಯ ಸಂಕೇತ ರಮಾಬಾಯಿ ಅಂಬೇಡ್ಕ‌ರ್: ಮಿಲಿಂದ್ ಸಾಗರ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನದಲ್ಲಿ ಮಾತೇ ರಾಮಬಾಯಿ ಅಂಬೇಡ್ಕರ್ ಅವರ 127ನೇ ಜನ್ಮದಿನವನ್ನು ಆಚರಣೆ ಮಾಡಲಾಯಿತು.

- Advertisement -

ರಮಾಬಾಯಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಭಾರತೀಯ ಬೌದ್ಧ ಮಹಾಸಭಾ ತಾಲೂಕು ಕಾರ್ಯದರ್ಶಿ ಮಿಲಿಂದ್ ಸಾಗರ್ ಮಾತನಾಡಿ, “ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆಯ ಬೆಂಬಲ ಇದ್ದೇ ಇರುತ್ತದೆ. ಈ ಸಾಲು ಹಳೆಯದಾದರೂ ತಾತ್ಪರ್ಯ ಮಾತ್ರ ನಿತ್ಯ. ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಬದುಕಿನಲ್ಲಿ ಪತ್ನಿ ರಮಾಬಾಯಿ ಅಂಬೇಡ್ಕರ್ ಅವರು ಬೆನ್ನೆಲುಬಾಗಿ ನಿಂತಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ರಮಾಬಾಯಿಯವರು ಹುಟ್ಟಿದ್ದು 1898 ಫೆಬ್ರವರಿ 7ರಂದು. ತಂದೆ ಭಿಕು ವಳಗಂಕರ್ ಮತ್ತು ತಾಯಿ ರುಕ್ಮಿಣಿ. ತಂದೆಯ ವೃತ್ತಿ ಮುಂಬಯಿಯ ಬಂದರಿನಲ್ಲಿ ಹಡಗುಗಳಿಗೆ ಮೀನು ತುಂಬುವುದು. ಆ ಕಾರಣಕ್ಕೆ 1906ರಲ್ಲಿ ಭೀಮರಾವ್ ರ ಜೊತೆ ರಮಾಬಾಯಿಯವರ ವಿವಾಹ ನಡೆದಾಗ ಅದು ನಡೆದದ್ದು ಮುಂಬಯಿಯ ಬೈಕುಲ್ಲ ಎಂಬ ಮೀನು ಮಾರುಕಟ್ಟೆಯಲ್ಲಿ. ಮಾರುಕಟ್ಟೆಯ ವ್ಯವಹಾರಗಳು ಮುಗಿದಾಗ ಸಂಜೆ ಭೀಮರಾವ್ ಮತ್ತು ರಮಾಬಾಯಿಯವರ ವಿವಾಹ ಆಗಿತ್ತು. ತಮ್ಮ ಪತ್ನಿಯನ್ನು ಅಂಬೇಡ್ಕರರು ಪ್ರೀತಿಯಿಂದ ರಾಮು ಎಂದು ಕರೆಯುತ್ತಿದ್ದರು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಜನವಿರೋಧಿ ಕೇಂದ್ರ ಬಜೆಟ್ ವಿರುದ್ಧ ರೈತ-ಕಾರ್ಮಿಕರ ಯುವಜನ ಸೇವಾ ಸಂಘ ಪ್ರತಿಭಟನೆ

ಈ ಸಂದರ್ಭದಲ್ಲಿ ಭಾರತೀಯ ಬೌದ್ಧ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಣ್ಣ ಕುಡಚಿ, ಮಲ್ಲಮ್ಮ ಕೊಂಬಿನ, ಯಶ್ವಂತ್ ಬಡಿಗೇರ್, ರವಿ ಕುಳಗೇರಿ, ಶ್ರೀಮಂತ ಹರನೂರ, ರವಿ ಕೊಳಕೋರ್, ವಿಕ್ರಂ ಬಡಿಗೇರ್, ಪರಶುರಾಮ್ ನಡಗಟ್ಟಿ, ಸಿದ್ದು ಜಳಕಿ, ಶರಣು ಕಟ್ಟಿ, ಮಾನಪ್ಪ ಹೊಸಮನಿ, ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...