ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು

Date:

Advertisements

ಚಿತ್ತಾಪುರ ತಾಲೂಕಿನ ಬೆಳಗುಂಪಾ ಗ್ರಾಮದ ಮರಳು ದಕ್ಕಾದಲ್ಲಿ ಕುರಿಗಾಯಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ.

ಶ್ರೀಧರ್ ಅಮೃತ ನವಲಕರ್ (28) ಮೃತರು. ನಿತ್ಯ ಕುರಿಗಳನ್ನು ಕಾಯುತ್ತಾ ಹೋಗುತಿದ್ದ ಶ್ರೀಧರ್ ಶನಿವಾರ ಮನೆಗೆ ಬಾರದೇ ಇರುವುದರಿಂದ ಮನೆಯವರು ಎಲ್ಲಾ ಕಡೆ ಹುಡುಕಾಡಿದರು ಪತ್ತೆಯಾಗಿಲ್ಲ. ಮರಳುಗಾರಿಕೆಗಾಗಿ ಆಳವಾಗಿ ತೊಡಿದ ನೀರು ತುಂಬಿದ ಬೃಹದಾಕಾರದ ಗುಂಡಿಯಲ್ಲಿ ಮೃತ ದೇಹ ಮಂಗಳವಾರ ಪತ್ತೆಯಾಗಿದೆ.

ವಿಷಯ ತಿಳಿದು ಕೋಲಿ ಕಬ್ಬಲಿಗಾ ಸಮನ್ವಯ ಸಮಿತಿಯ ಜಿಲ್ಲಾ ಮುಖಂಡರಾದ ಅವ್ವಣ್ಣ ಮ್ಯಾಕೇರಿ, ಬಸವರಾಜ ಬೂದಿಹಾಳ, ಗುಂಡು ಐನಾಪುರ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ನೇತೃತ್ವದಲ್ಲಿ ನೂರಾರು ಮುಖಂಡರು ದೌಡಾಯಿಸಿ ಘಟನೆಯನ್ನು ಖಂಡಿಸಿ ಪ್ರತಿಭಟಿಸಿದರು.

Advertisements

ಅವ್ವಣ್ಣ ಮ್ಯಾಕೇರಿ ಮತ್ತು ಗುಂಡು ಐನಾಪುರ ಅವರು ಮಾತನಾಡಿ, ʼಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಒಂದು ಸರ್ಕಾರಿ ನೌಕರಿ, ಮನೆ ಕೊಡಬೇಕು. ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಬೇಕುʼ ಎಂದು ಆಗ್ರಹಿಸಿದರು.

ಮರಳುಗಾರಿಗಾಗಿ ಬರೀ 5 ಎಕರೆ ಭೂಮಿಗೆ ಅನುಮತಿ ಪಡೆದು ರೈತರಿಗೆ ಹಣದ ಆಮಿಷ ತೋರಿಸಿ 20-30 ಎಕರೆ ಖರೀದಿಸಿ ಅನಧಿಕೃತ ಮರಳುಗಾರಿಕೆ ಮಾಡುತ್ತಿದ್ದಾರೆ. ಅಲ್ಲದೇ 5 ಅಡಿ ಅಗೆಯಲು ಅನುಮತಿ ಪಡೆದು 70 ಅಡಿ ಅಗೆಯುವ ಮೂಲಕ ರಾಜಾರೋಷವಾಗಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಅಕ್ರಮ ಮರಳುಗಾರಿಕೆ ತಡೆಹಿಡಿದು ಇದರಲ್ಲಿ ಶಾಮೀಲಾದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ಎಸ್‌ಬಿಐ ಎಟಿಎಂನಿಂದ ₹18 ಲಕ್ಷ ದರೋಡೆ

ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಮಾಡಬೂಳ ಪಿಎಸ್‍ಐ ಶೀಲಾ ದೇವಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X