ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿ ಉಮೇರ್ (23) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ 11:30ರ ಸಮಯದಲ್ಲಿ ಹಲ್ಲೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದೇಹದ ಹಲವೆಡೆ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಉಮೇರ್ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಮೇರ್ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಪಂಪ್ಸೆಟ್ ಆಫ್ ಮಾಡುವಾಗ ವಿದ್ಯುತ್ ಶಾಕ್; ಬಾಲಕಿ ದುರ್ಮರಣ
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆಯಾಗಿರುವ ಶಂಕೆಯಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.