ಕಲಬುರಗಿ | ತ್ಯಾಗಮಯಿ ರಮಾಬಾಯಿಯನ್ನು ಸ್ಮರಿಸಿಕೊಳ್ಳಬೇಕು: ಡಾ. ಹಣಮಂತರಾವ್ ದೊಡ್ಡಮನಿ

Date:

Advertisements

ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮವು ಕಲಬುರಗಿ ಜಿಲ್ಲೆಯ ಶರಣ ಸಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟಿಸಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಣಮಂತರಾವ ದೊಡ್ಡಮನಿ ಮಾತನಾಡಿ,
“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬೆಳವಣಿಗೆಯ ಹಿಂದೆ ಮಾತೆ ರಮಾಬಾಯಿ ಅವರ ಶ್ರಮ, ತ್ಯಾಗ ತುಂಬಾ ಇದೆ. ಅಂಬೇಡ್ಕರ್ ಅವರು ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಾಗ ತಮ್ಮ ಎರಡು ಮಕ್ಕಳು ತೀರಿಕೊಂಡರು ಸಹ ಸಹಿಸಿಕೊಂಡು ಅವರ ಓದಿಗೆ ಸಮಸ್ಯೆಯಾಬಾರದಂತೆ ನೋಡಿಕೊಂಡರು. ರಮಾಬಾಯಿ ಅಂಬೇಡ್ಕರ್ ಅವರು ಆ ನಂತರ ಪತ್ರದ ಮೂಲಕ ಮಕ್ಕಳು ತೀರಿಕೊಂಡ ವಿಷಯವನ್ನು ಅಂಬೇಡ್ಕರ್ ಅವರಿಗೆ ತಿಳಿಸುತ್ತಾರೆ. ಅಂತಹ ಮಹಾನ ತ್ಯಾಗಮಯಿ ರಮಾತಾಯಿಯನ್ನು ನಾವು ಇಂದು ಸ್ಮರಿಸಿಕೊಳ್ಳುವ ಅವಶ್ಯಕತೆ ಇದೆ” ಎಂದರು.

ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ ಮಾತನಾಡಿ, ನಮ್ಮ ಮಕ್ಕಳ ಬೆಳವಣಿಗೆಯ ಕಡೆಗೆ ಹಾಗೂ ವಿದ್ಯಾಭ್ಯಾಸದ ಕಡೆಗೆ ನಾವು ಪಾಲಕರು ಗಮನ ಹರಿಸಬೇಕಿದೆ. ಬರೀ ವಿದ್ಯಾವಂತರಾದರೆ ಸಾಲದು ಜೊತೆಗೆ ಅವರಿಗೆ ಒಳ್ಳೆಯ ಸಂಸ್ಕಾರ ನೀಡಬೇಕಾಗಿದೆ. ಇಂತಹ ಟ್ರಸ್ಟ್‌ಗಳ ವತಿಯಿಂದ ಶಿಬಿರಗಳು ಹಾಗೂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಹಮ್ಮಿಕೊಳ್ಳಬೇಕು ಮತ್ತು ಯುವ ಜನತೆಗೆ ಹೋರಾಟಗಾರರ ಜೀವನ ಚರಿತ್ರೆ ಹಾಗೂ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಕಂಡ ಕಷ್ಟದ ದಿನಗಳು ಅರಿವು ಮೂಡಿಸಬೇಕು ಎಂದು ಮಾತೆ ರಮಾತಾಯಿಯ ಕಷ್ಟದ ದಿನಗಳನ್ನು ವಿವರಿಸಿದರು.

Advertisements

ಇದನ್ನು ಓದಿದ್ದೀರಾ? ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆಹೋದ ಉಡುಪಿ ವಕೀಲರ ಸಂಘ!

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ, ನಗರದ ಮುಖಂಡರಾದ ಶಿವಮೂರ್ತಿ ನಡಗೇರಿ, ಶ್ರೀಮತಿ ಭಾರತಬಾಯಿ ಬಬಲಾದ, ಪ್ರೊಫೆಸರ್ ಶಾಂತಪ್ಪ ಹಾದಿಮನಿ ಅವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಿದ್ದರಾಮ ನಡಗೇರಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಣಮಂತರಾವ ದೊಡ್ಡಮನಿ ಹಾಗೂ ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಗರದ ಗಣ್ಯರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X