ಕಲಬುರಗಿ | ಕೇಂದ್ರ ಕಾರಾಗೃಹ ಜಾಮರ್‌ನಿಂದ ಗ್ರಾಮಗಳ ನೆಟ್‌ವರ್ಕ್ ಸ್ಥಗಿತ: ವ್ಯಾಪ್ತಿ ಕಡಿತಕ್ಕೆ ಗ್ರಾಮಸ್ಥರ ಆಗ್ರಹ

Date:

ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್‌ನ ವ್ಯಾಪ್ತಿಯನ್ನು ತಾಂತ್ರಿಕವಾಗಿ ಮರುಪರಿಶೀಲಿಸಿ, ಸುತ್ತಮುತ್ತಲಿನ ಗ್ರಾಮಗಳ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಮಾತನಾಡಿದ ಗ್ರಾಮಸ್ಥರು, ‘ಇತ್ತೀಚೆಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ತಡೆಗೋಡೆ ಹಾರಿ ಪರಾರಿಯಾದ ಘಟನೆಯ ಬಳಿಕ ಜೈಲಿನ ಮೊಬೈಲ್ ಜಾಮರ್‌ನ ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ನಂದಿಕೂರ್, ಸೀತನೂರ್, ಪಾಣೆಗಾಂವ್, ಶಿರನೂರ್, ಖಣದಾಳ ಹಾಗೂ ಇಟಗಾ (ಕೆ) ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

‘ಮೊಬೈಲ್ ನೆಟ್‌ವರ್ಕ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಕರೆಗಳು ಸಂಪರ್ಕವಾಗುತ್ತಿಲ್ಲ. ವಾಟ್ಸ್‌ಆ್ಯಪ್‌, ಫೋನ್‌ಪೇ, ಗೂಗಲ್‌ಪೇ ಸೇರಿದಂತೆ ಡಿಜಿಟಲ್ ಸೇವೆಗಳು ಸ್ಥಗಿತಗೊಂಡಿದ್ದು, ಇಂಟರ್ನೆಟ್ ಸಂಪರ್ಕದ ಕೊರತೆಯಿಂದ ತುರ್ತು ಮಾಹಿತಿ ಹಾಗೂ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ದೂರಿದರು.

‘ಮೊಬೈಲ್ ಸಂಪರ್ಕದ ಸಮಸ್ಯೆಯಿಂದ ವ್ಯಾಪಾರಸ್ಥರು, ರೈತರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತೊಂದರೆ ಅನುಭವಿಸುತ್ತಿದ್ದು, ವ್ಯವಹಾರಗಳ ಮೇಲೂ ದುಷ್ಪರಿಣಾಮ ಉಂಟಾಗಿದೆ. ಕೆಲವರು ಮನೆಯ ಮೇಲ್ಮಾವಣಿಗೆ ತೆರಳಿ ಕರೆ ಮಾಡಲು ಪ್ರಯತ್ನಿಸಿದರೂ ಧ್ವನಿ ಸ್ಪಷ್ಟವಾಗಿ ಕೇಳಿಸದೆ ಕರೆಗಳು ಮಧ್ಯದಲ್ಲೇ ಕಡಿತಗೊಳ್ಳುತ್ತಿವೆ’ ಎಂದು ತಿಳಿಸಿದರು.

‘ಜೈಲಿನ ಭದ್ರತೆಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಜಾಮರ್‌ನ ವ್ಯಾಪ್ತಿಯನ್ನು ತಾಂತ್ರಿಕವಾಗಿ ಮರುಪರಿಶೀಲಿಸಿ, ಗ್ರಾಮಗಳ ಮೊಬೈಲ್ ನೆಟ್‌ವರ್ಕ್‌ಗೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಭೂ-ಒಡೆತನ ಯೋಜನೆ ಜಾರಿಗೊಳಿಸಲು ಸಮತಾ ಸೈನಿಕ ದಳ ಪ್ರತಿಭಟನೆ

ಈ ಸಂದರ್ಭದಲ್ಲಿ ಪವನಕುಮಾರ್ ವಳಕೇರಿ, ರವೀಂದ್ರ ವಿಭೂತಿ, ಸಂಗಮೇಶ ನಾಗನಳ್ಳಿ, ರಾಜಣ್ಣಗೌಡ ಪಾಟೀಲ್, ಖಾದರ್ ಸಾಬ್, ಸಯ್ಯದ್ ಪಟೇಲ್, ಉಮೇಶ ಶ್ರೀಗೇರಿ, ಮಲ್ಲಿನಾಥ ನಾಗನಳ್ಳಿ, ಮಹಾದೇವಪ್ಪ ಪಾಟೀಲ್ ಸೇರಿದಂತೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...