ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

Date:

Advertisements

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.

ಭೀಮಾ ನದಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ, ಅಲ್ಮೇಲ್, ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ, ಕಲಬುರಗಿ ಮತ್ತು ಚಿತ್ತಾಪುರ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಪತ್ರ ಬರೆದಿದ್ದು, ನೀರನ್ನು ಕಬ್ಬು ಬೆಳೆಗೆ ಹರಿಸದಿರುವಂತೆ ಎಚ್ಚರಿಸಿದ್ದಾರೆ.

ಬೇಸಿಗೆಗಾಗಿ ನೀರು ಉಳಿಸಬೇಕಿದ್ದು, ರೈತರು ತಮ್ಮ ಬೆಳೆಗಳಿಗೆ ನದಿಯಿಂದ ನೀರು ಹರಿಸಿದರೆ ಕಲಬುರಗಿ, ಅಫಜಲಪುರ, ಜೇವರ್ಗಿ ಮುಂತಾದ ನಗರಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ತೊಂದರೆಯಾಗುತ್ತದೆ. ಬೇಸಿಗೆಯಲ್ಲಿ ರೈತರಿಗೆ ಆಸರೆಯಾಗಿರುವ ಏಕೈಕ ಬೆಳೆ ಕಬ್ಬು. ಇದಕ್ಕೆ ನೀರು ಬೇಕೇ ಬೇಕು. ಆದರೆ, ಕುಡಿಯುವ ನೀರಿನ ಅವಶ್ಯಕತೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisements

ನಾವು ಕಷ್ಟಪಟ್ಟು ಕಬ್ಬು ಬೆಳೆದಿದ್ದೇವೆ, ಇಳುವರಿ ಕಡಿಮೆಯಾಗಿದೆ. ಈ ವರ್ಷ ಮಳೆಯಾಗದೇ ನಾವು ಸಂಕಷ್ಟದಲ್ಲಿದ್ದೇವೆ. ಈ ಬೇಸಿಗೆಯಲ್ಲಿ ಬೆಳೆ ಉಳಿಸಲು ಹೋರಾಡುತ್ತಿದ್ದೇವೆ. ನಮ್ಮಲ್ಲಿ ವಿದ್ಯುತ್ ಸಂಪರ್ಕಕೂಡ ಸ್ಥಗಿತಗೊಂಡಿದೆ ಎಂದು ಹೇಳುತ್ತಾರೆ ಅಫಜಲಪುರದ ರೈತರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಫಜಲಪುರ ತಹಸೀಲ್ದಾರ್ ಸಂಜೀವಕುಮಾರ ದಾಸರ್, ಶಾಸಕ ಎಂ.ವೈ.ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿದ್ದು, ನದಿ ದಡದಲ್ಲಿರುವ ಹೊಲಗಳಿಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯೋಚಿಸಲಾಗಿದೆ. ಭೀಮಾ ಮದಿಗೆ ಅಡ್ಡಲಾಗಿ ಸುಮಾರು ನಾಲ್ಕು ಬ್ಯಾರೇಜ್‌ಗಳಿವೆ. ನದಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ, ಭೀಮಾ ನದಿ ದಡದಲ್ಲಿರುವ ರೈತರು ಬೆಳೆಯುಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅಧಿಕಾರಿಗಳು ಕುಡಿಯುವ ನೀರನ್ನು ಉಳಿಸಿ ಬಳಸಲು ಯೋಚಿಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X