ಕಲಬುರಗಿ | ತೊಗರಿ ಬೆಲೆ ಹೆಚ್ಚಾದರೆ ರೈತರಿಗೇನು ಲಾಭ?; ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಅಸಮಾಧಾನ

Date:

Advertisements

ತೊಗರಿ ಬೆಳೆಗಾರರ ಹತ್ತಿರ ತೊಗರಿ ಇಲ್ಲದ ಸಮಯದಲ್ಲಿ ಬೆಲೆ ಗಗನಕ್ಕೇರಿದರೆ ತೊಗರಿ ಬೆಳೆಗಾರರಿಗೆ ಏನು ಲಾಭ? ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಬೆಲೆ ಹೆಚ್ಚಳವಾಗುವುದರಿಂದ ಕೇವಲ ವ್ಯಾಪಾರಸ್ಥರಿಗೆ ಮತ್ತು ಬಂಡವಾಳಶಾಹಿಗಳಿಗೆ, ಅದಾನಿ ಅಂಬಾನಿಗಳಿಗೆ, ದಲ್ಲಾಳಿಗಳಿಗೆ ಮಾತ್ರ ಲಾಭವಾಗುತ್ತದೆ. ಆದರೆ ತೊಗರಿ ಬೆಳೆಗಾರರಿಗೆ ಕವಡೆಯಷ್ಟೂ ಲಾಭವಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯಾಪಾರಸ್ಥರಿಗೆ ಮತ್ತು ದಲ್ಲಾಳಿಗಳಿಗೆ, ಬಂಡವಾಳಶಾಹಿಗಳಿಗೆ ಮಾತ್ರ ಲಾಭವಾಗುತ್ತಿದೆಯೇ ಹೊರತು ನಿಜವಾದ ಅನ್ನದಾತರಿಗೆ, ತೊಗರಿ ಬೆಳೆಗಾರರಿಗೆ ಲಾಭವಿಲ್ಲ. ಈ ಸಮಯದಲ್ಲಿಯೂ ತೊಗರಿ ಬೆಳೆಗಾರರು ಸಾಲದ ಮಡುವಿನಲ್ಲಿ ಒದ್ದಾಡುತ್ತಿದ್ದಾರೆ” ಎಂದರು.

Advertisements

“ಕರ್ನಾಟಕ ರಾಜ್ಯ ಮತ್ತು ದೇಶದಲ್ಲಿ 130 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಪ್ರೊಟೀನ್ ಉಪಯುಕ್ತವಾದ ತೊಗರಿ ಬೆಳೆ ಉತ್ಪಾದನೆ 3 ವರ್ಷಗಳಲ್ಲಿ ಕಡಿಮೆಯಾಗಿದೆ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಮತ್ತು ಅತಿವೃಷ್ಟಿ ಮಳೆಯಿಂದ ಹಾನಿಯಾದ ತೊಗರಿ ಅಲ್ಲದೆ ನೇಟೆ ರೋಗದಿಂದ ಒಣಗಿ ಹೋದ ತೊಗರಿ ಬೆಳೆ ತೊಗರಿ ಬೆಳೆಗಾರರಿಗೆ ಕೈ ಕೊಟ್ಟಂತಾಗಿದೆ. ಹೀಗಾಗಿ ನಾನಾ ರೀತಿಯ ಸಮಸ್ಯೆಗಳಿಂದಾಗಿ ಇಡೀ ದೇಶದಲ್ಲಿ ತೊಗರಿ ಬೆಳೆ ಉತ್ಪಾದನೆ ನೆಲಕಚ್ಚಿದರೂ ಕೇಂದ್ರ ಸರ್ಕಾರ ರೈತರ ನೆರವಿಗೆ ಬಾರದಿರುವುದು ದುರಂತವೇ ಸರಿ” ಎಂದು ಬೇಸರ ವ್ಯಕ್ತಪಡಿಸಿದರು.

“ಕಲಬುರಗಿ ಜಿಲ್ಲೆಯ ಜನಸಂಖ್ಯೆ 25.66 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ಜಿಲ್ಲೆಯಲ್ಲಿ ಒಟ್ಟು 6.37 ಲಕ್ಷ ಮಂದಿ ರೈತರಿದ್ದಾರೆ. ಆದರೆ ತಿಂಗಳಿಗೆ ಸರಾಸರಿ 20 ಲಕ್ಷ ಕ್ವಿಂಟಲ್ ತೊಗರಿ ಬೇಳೆ ಬೇಕಾಗುತ್ತದೆ. 5 ತಿಂಗಳವರೆಗೆ ಎಷ್ಟು ತೊಗರಿ ಬೇಕಾಗಬಹುದೆಂದು ಆಂತಕ ಪಡುವಂತಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

“ಬರ್ಮಾ ದೇಶದಿಂದ ತೊಗರಿಯನ್ನು ಆಮದು ಮಾಡಿಕೊಂಡು ಪ್ರತಿ ಕ್ವಿಂಟಾಲ್ ತೊಗರಿಗೆ ಅಂದಾಜು ₹11,000 ಬೆಲೆ ಕೊಡುತ್ತಾರೆ. ಆದರೆ, ಇದೇ ನೆಲದ ಅನ್ನದಾತರಿಗೆ ಬೆಂಬಲ ಬೆಲೆ ನೀಡುವುದಿಲ್ಲ. ನಮ್ಮಲ್ಲಿಯೇ ಬೆಳೆಯುವ ಬೆಳೆಗಳನ್ನೂ ಹೊರದೇಶದಿಂದ ಆಮದು ಮಾಡಿಕೊಂಡರೆ ಇಲ್ಲಿಯ ರೈತರ ಗತಿ ಏನಾಗಬಹುದು ಎಂಬುದನ್ನು ಸರ್ಕಾರ ಯೋಚಿಸಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.

“ಈ ವರ್ಷ ತೊಗರಿ ನಾಡು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇನ್ನೂ ಕೆಲವು ತಾಲೂಕುಗಳಲ್ಲಿ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬಿತ್ತನೆಯೂ ಆಗಿಲ್ಲ. ಈ ವರ್ಷವೂ ಕೂಡ ತೊಗರಿ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವುದು ತಿಳಿದುಬಂದಿದೆ. ಇದರಿಂದ ಮತ್ತಷ್ಟು ಆತಂಕ ಎದುರಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X