ಕಲಬುರಗಿ | ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಪ್ರಕರಣ : ಗಂಡ, ಅತ್ತೆಗೆ 7 ವರ್ಷ ಜೈಲು ಶಿಕ್ಷೆ

Date:

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದ ಗಂಡ ಮತ್ತುಆತನ ತಾಯಿಗೆ ಕಲಬುರಗಿಯ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿದೆ.

- Advertisement -

ಮೃತಳ ಪತಿ ಕಲಬುರಗಿ ನಿವಾಸಿ ವಿನಯ ವಿಜಯಕುಮಾರ ಕಮಲಾಪುರ ಮತ್ತು ಆತನ ತಾಯಿ ಶಶಿಕಲಾ ವಿಜಯಕುಮಾರ ಕಮಲಾಪುರ ಶಿಕ್ಷೆಗೊಳಗಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದ ಧನರಾಜ ನಾಗಶೆಟ್ಟಿ ಮೆಂಗಾ ಎಂಬುವರ ಮಗಳು ಸಂಧ್ಯಾರಾಣಿಯನ್ನು ವಿನಯ ಅವರೊಂದಿಗೆ 2017ರ ಜೂನ್ 19 ರಂದು ವರದಕ್ಷಿಣೆ ರೂಪದಲ್ಲಿ 11 ಲಕ್ಷ ಮತ್ತು 21 ತೊಲೆ ಬಂಗಾರ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆದರೆ ಮದುವೆಯಾದ 5 ತಿಂಗಳ ನಂತರ ಸಂಧ್ಯಾರಾಣಿಯ ಗಂಡ ಮತ್ತು ಅತ್ತೆ ಶಶಿಕಲಾ ಇಬ್ಬರೂ ಸೇರಿ ಮದುವೆ ಸಂದರ್ಭದಲ್ಲಿ ಕಡಿಮೆ ವರದಕ್ಷಿಣೆ ತಂದಿದ್ದು, ಇನ್ನೂ ಹೆಚ್ಚಿನ ಹಣ, ಬಂಗಾರ ಮತ್ತು ಕಾರು ತೆಗೆದುಕೊಂಡು ಬರುವಂತೆ ಕಿರುಕುಳ ನೀಡುತ್ತಿದ್ದರು.

ಗಂಡ ಮತ್ತು ಅತ್ತೆಯ ಕಿರುಕುಳ ತಾಳಲಾರದೆ ಸಂಧ್ಯಾರಾಣಿ 2018ರ ಸಪ್ಟೆಂಬರ್ 29 ಮತ್ತು 30 ನಡುವಿನ ಅವಧಿಯಲ್ಲಿ ಗಂಡನ ಮನೆಯ ಬೆಡ್‍ ರೂಮಿನಲ್ಲಿ ಫ್ಯಾನ್‌ಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಪೊಲೀಸರು ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ; ಖಂಡನೀಯ

ವಾದ ಪ್ರತಿವಾದ ಆಲಿಸಿದ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ ಕರೋಶಿ ಅವರು ಶಿಕ್ಷೆಯನ್ನು ವಿಧಿಸಿದ್ದಾರೆ. ಸರ್ಕಾರದ ಪರವಾಗಿ, ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ, ಎನ್.ಬಳಬಟ್ಟಿ ಅವರು ವಾದ ಮಂಡಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...