ಕಲಬುರಗಿ | ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನ ಹತ್ಯೆ

Date:

Advertisements

ಕಲಬುರಗಿ ಜಿಲ್ಲೆಯಲ್ಲಿ ರಾಜಕೀಯ ವೈಷಮ್ಯಗಳಿಂದಾಗಿ ನಡೆಯುವ ಗಲಾಟೆಗಳು ಹೆಚ್ಚುತ್ತಿವೆ. ಈ ಹಿಂದೆ, ಅಂಬೇಡ್ಕರ್ ಜಯಂತಿ ವೇಳೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದೀಗ, ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದ ಕಾರಣಕ್ಕೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜಾವೀದ್ ಚಿನ್ನವಳ್ಳಿ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರವಷ್ಟೇ ಕಲಬುರಗಿಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಗಿದಿತ್ತು. ಮತದಾನ ಮುಗಿದ ಒಂದು ದಿನದ ಬಳಿಕ, ಬುಧವಾರ ಸಂಜೆ ದುಷ್ಕರ್ಮಿಗಳು ಜಾವೀದ್‌ನನ್ನು ಪಾರ್ಟಿ ಮಾಡಲೆಂದು ಕರೆದೊಯ್ದಿದ್ದಾರೆ.

Advertisements

ಅಲ್ಲಿ, ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದರ ಬಗ್ಗೆ ಚರ್ಚೆ ನಡೆದಿದ್ದು, ಜಾವಿದ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಏಪ್ರಿಲ್‌ ತಿಂಗಳಿನಲ್ಲಿ ಕಲಬುರಗಿಯ ಅಶೋಕ್ ನಗರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಅಶೋಕ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿತ್ತು. ಕೃತ್ಯ ಎಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಈ ಘಟನೆಗೂ ಕೆಲ ದಿನಗಳ ಹಿಂದೆ, ಕಲಬುರಗಿಯ ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಗಿರೀಶ್ ಚಕ್ರ ಎಂಬಾತನನ್ನು ಕೊಲೆ ಮಾಡಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X