ಕಲಬುರಗಿ | ಮಕ್ಕಾ ಮಸೀದಿಯಲ್ಲಿ ರಂಜಾನ್ ಇಫ್ತಾರ್ ಕೂಟ: ಸಾಮರಸ್ಯದ ಸಂದೇಶ

Date:

ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ ರಂಜಾನ್ ಹಬ್ಬದ ಅಂಗವಾಗಿ ಇಫ್ತಾರ್ ಕೂಟವನ್ನು ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ರಂಜಾನ್ ಮಾಸದ ಮಹತ್ವವನ್ನು ವಿವರಿಸಿದರು.

- Advertisement -

ಇದೆ ವೇಳೆ ಗಣ್ಯರು ಮಾತನಾಡಿ, ‘ರಂಜಾನ್ ಮಾಸವು ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರ ಕಾಲವಾಗಿದ್ದು, ಇದು ಆತ್ಮಶುದ್ಧೀಕರಣ, ನಿಯಮಾನುಸರಣೆ ಮತ್ತು ಅಲ್ಲಾಹನಿಗೆ ಹತ್ತಿರವಾಗುವ ಸಮಯವಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಉಪವಾಸದ ಮೂಲಕ ಶಾರೀರಿಕ ಮತ್ತು ಮಾನಸಿಕ ನಿಯಂತ್ರಣ ಸಾಧಿಸುವುದರ ಜೊತೆಗೆ, ಬಡವರ ನೋವು-ನಲಿವುಗಳನ್ನು ಅರಿಯುವ ಮಾನವೀಯತೆ ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

‘ರಂಜಾನ್ ತಿಂಗಳಲ್ಲಿ ಪ್ರತಿದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ‘ರೋಜಾ’ ಉಪವಾಸವನ್ನು ಆಚರಿಸುವುದು ಕಡ್ಡಾಯವಾಗಿದ್ದು, ಇದು ಕೇವಲ ಆಹಾರ ತ್ಯಾಗವಲ್ಲದೆ, ಕೆಟ್ಟ ಆಲೋಚನೆಗಳು, ಅಸಹನೀಯತೆ ಹಾಗೂ ಅನೈತಿಕ ವರ್ತನೆಗಳಿಂದ ದೂರವಿರುವ ಶಿಸ್ತಿನ ಜೀವನಕ್ಕೆ ಮಾರ್ಗದರ್ಶನ ನೀಡುತ್ತದೆ’ ಎಂದು ವಿವರಿಸಲಾಯಿತು.

1588093

‘ಈ ಪವಿತ್ರ ಅವಧಿಯಲ್ಲಿ ಕುರಾನ್ ಪಠಣಕ್ಕೆ ವಿಶೇಷ ಮಹತ್ವವಿದ್ದು, ಪ್ರತಿಯೊಬ್ಬರೂ ತಮ್ಮ ಜೀವನವನ್ನು ಸತ್ಯನಿಷ್ಠೆಯಿಂದ ನಡೆಸಿಕೊಳ್ಳುವಂತೆ ಪ್ರೇರಣೆ ಪಡೆಯುತ್ತಾರೆ. ಜೊತೆಗೆ, ಬಡವರಿಗಾಗಿ ಝಕಾತ್ ಮತ್ತು ಫಿತ್ರ ರೂಪದಲ್ಲಿ ದಾನ ಮಾಡುವುದನ್ನು ಧಾರ್ಮಿಕ ಕರ್ತವ್ಯವಾಗಿ ಪರಿಗಣಿಸಲಾಗುತ್ತದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು ‘ಧರ್ಮ, ಜಾತಿ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಕಾಪಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಇಫ್ತಾರ್ ಕೂಟವು ಕೇವಲ ಉಪವಾಸ ಮುರಿಯುವ ಕಾರ್ಯಕ್ರಮವಲ್ಲ, ಪರಸ್ಪರ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಗಿದೆ’ ಎಂದು ಹೇಳಿದರು.

ರಂಜಾನ್ ಅಂತ್ಯದಲ್ಲಿ ಚಂದ್ರದರ್ಶನವಾದ ನಂತರ ಷವ್ವಾಲ್ ತಿಂಗಳ ಮೊದಲ ದಿನ ಈದ್-ಉಲ್-ಫಿತರ್ ಹಬ್ಬವನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಆ ದಿನ ವಿಶೇಷ ನಮಾಜ್ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂತೋಷವನ್ನು ಹಂಚಿಕೊಳ್ಳುವುದು ಸಂಪ್ರದಾಯವಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮಾ. 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ

ಇಫ್ತಾರ್ ಕೂಟದಲ್ಲಿ ಅನೇಕ ಮುಸ್ಲಿಂ ಬಾಂಧವರು, ಯುವಕರು ಹಾಗೂ ವಿವಿಧ ಸಮುದಾಯದ ಜನರು ಭಾಗವಹಿಸಿ, ಉಪವಾಸ ಮುರಿದು ಸಾಮರಸ್ಯದ ಸಂದೇಶವನ್ನು ಸಾರಿದರು. ಕಾರ್ಯಕ್ರಮವು ಸೌಹಾರ್ದ ಮತ್ತು ಏಕತೆ ಸಾರುವ ಮೂಲಕ ಯಶಸ್ವಿಯಾಗಿ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...