ಕಲಬುರಗಿ | ತೊಗರಿ ಬೆಳೆಗೆ ಗೊಣ್ಣೆಹುಳು ಬಾಧೆ; ಅಗತ್ಯ ಕ್ರಮಕ್ಕೆ ಕೃಷಿ ಅಧಿಕಾರಿಗಳ ಸಲಹೆ

Date:

Advertisements

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ಗೊಣ್ಣೆಹುಳುವಿನ ಬಾಧೆ ಕಂಡು ಬಂದಿದ್ದು, ರೈತರು ಆತಂಕಗೊಂಡಿದ್ದಾರೆ. ಮಳೆ ವಿಳಂಬದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಇದೀಗ ತೊಗರಿ ಬೆಳೆಗೆ ರೋಗ ಬಡಿದಿರುವುದರಿಂದ ತೊಗರಿ ಬೆಳೆಗಾರರು ಇನ್ನಷ್ಟು ಆತಂಕಕ್ಕೀಡಾಗಿದ್ದಾರೆ.

ಅಲ್ಪಸ್ವಲ್ಪ ಬಂದ ಮಳೆಗೆ ತೊಗರಿ ಬಿತ್ತನೆ ಮಾಡಿ ಉತ್ತಮ ಬೆಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಇದೀಗ ಗೊಣ್ಣೆ ಹುಳಿವಿನ ಬಾಧೆ ಉಂಟಾಗಿದೆ. ಕಳೆದ ವರ್ಷ ಬೆಳೆದ ಬೆಳೆ ನೆಟೆ ರೋಗದಿಂದ ಹಾಳಾಗಿತ್ತು. ಈ ಬಾರಿ ಗೊಣ್ಣೆ ಹುಳುವಿನ ರೋಗ ಬಂದಿರುವುದು ರೈತರಿಗೆ ದಿಕ್ಕು ತೋರದಂತಾಗಿದೆ.

ಕಲಬುರಗಿ ತಾಲೂಕಿನ ಫರಹತಾಬಾದ ಹೋಬಳಿಯ ಫೀರೊಜಾಬಾದ್ ನಡುವಿನಹಳ್ಳಿ ಮತ್ತು ಸೋಮನಾಥಹಳ್ಳಿಗೆ ಕಲಬುರಗಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕೃಷಿ ಅಧಿಕಾರಿ ಶೃತಿ ಹಾಗೂ ಶಿವರಾಯ ಬಿಟಿಎಂ ಅವರು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಮಣ್ಣಿನಲ್ಲಿ ತೇವಾಂಶ ಕೊರತೆಯಿಂದ ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳುವಿನ ಬಾಧೆ ಉಂಟಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅದರ ಹತೋಟಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ.

Advertisements

ಗೊಣ್ಣೆ ಹುಳು ಬಾಧೆ ಲಕ್ಷಣಗಳು

“ಬೇರು ಮತ್ತು ಕಾಂಡ ಕೊರೆದು ಗಿಡಗಳು ಬಾಡುವುದು ಈ ಬಾಧೆಯ ಲಕ್ಷಣಗಳಾಗಿದ್ದು, ರೈತರು ಕೆಲವು ಹತೋಟಿ ಕ್ರಮಗಳನ್ನು ಅನುಸರಿಸಬೇಕು” ಎಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.

ಹತೋಟಿ ಕ್ರಮಗಳು

  • ನೀರು ಲಭ್ಯವಿದ್ದಲ್ಲಿ ಜಮೀನಿಗೆ ನೀರು ಹಾಯಿಸುವುದು.
  • ಅಂತರ ಬೇಸಾಯ
  • ಕೈಯಿಂದ ಮಣ್ಣಿನಲ್ಲಿ ಇರುವ ಹುಳುವನ್ನು ಆರಿಸಿ ತೆಗೆಯುವುದು.
  • ಬೇವಿನ ಹಿಂಡಿ 50 ಕೆಜಿ + ಮೆಟಾರಿಜಿಯಂ ಪುಡಿ 2 ಕೆಜಿ ಪ್ರತಿ ಎಕರೆಗೆ ಮಣ್ಣಿಗೆ ಹಾಕಬೇಕು.
  • ಕ್ಲೋರೋಪೈರಿಫಾಸ್ 3 ಮಿ ಲೀ ಪ್ರತಿ ಒಂದು ಲೀಟರ್ ನೀರಿಗೆ ಬೇರಿಸಿ ಬೆಳೆಯ ಬೇರಿಗೆ ಸಿಂಪರಣೆ ಮಾಡಬೇಕು.
  • ಪ್ರತಿ ಎಕರೆಗೆ 4 ಕೆಜಿ ಫೋರೇಟ್ ಅಥವಾ ಕಾರ್ಬೋಪ್ಯೊರಾನ್-3ಜಿಯನ್ನು ಬೆಳೆಯ ಸಾಲಿಗೆ ಸುರಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ...

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ...

ಕಲಬುರಗಿ | ನಿರಂತರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆ‌ಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು...

ಕಲಬುರಗಿ | ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ...

Download Eedina App Android / iOS

X