ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

Date:

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ ಗೃಹ ಸಚಿವರ ತವರು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬರು ನೀಡಿದ ದೂರಿನಿಂದ ಕೋಪಗೊಂಡ ಪೊಲೀಸ್ ಕಾನ್ಸ್ಟೇಬಲ್, ಠಾಣೆಯ ಪಿಎಸ್‌ಐ ಅವರ ವೈಯಕ್ತಿಕ ಕಾರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ತೀವ್ರ ಸಂಚಲನ ಮೂಡಿಸಿದೆ.

- Advertisement -

ಮಹಾಗಾವ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಗಾವ್ ಕ್ರಾಸ್ (ಕಮಲಾಪುರ ತಾಲೂಕು) ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಸ್ತುತ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆರೋಪಿ ಕಾನ್ಸ್ಟೇಬಲ್ ರಾಜಶೇಖರ ವರನಾಳ್, ಈ ಹಿಂದೆ ಮಹಾಗಾವ್ ಪೊಲೀಸ್ ಠಾಣೆಯಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಆರೋಪಿಯು ಮಹಾಗಾವ್ ಕ್ರಾಸ್‌ನಲ್ಲಿರುವ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂದು ಆರೋಪವಿದೆ. ಮಹಿಳೆಯ ಸಂಬಂಧಿಕರು ದೂರು ನೀಡಿದ್ದರಿಂದ ಚಿಂಚೋಳಿಗೆ ವರ್ಗಾಯಿಸಲಾಗಿತ್ತು. ಆದರೆ ಮಕ್ಕಳ ವಿದ್ಯಾಭ್ಯಾಸದ ನೆಪ ಹೇಳಿ ಮಹಾಗಾವ್ ಕ್ರಾಸ್‌ನಲ್ಲೇ ವಾಸ ಮುಂದುವರಿಸಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 13ರಂದು ಆರೋಪಿ ಮಹಿಳೆಯನ್ನು ರಸ್ತೆಯಲ್ಲಿ ಹಲ್ಲೆ ಮಾಡಿ, ಮನೆಗೆ ನುಗ್ಗಿ ಬಾಗಿಲು ಒಡೆದು, ಮನೆಯಲ್ಲಿದ್ದ ಕೆಲವು ವಸ್ತುಗಳಿಗೆ ಬೆಂಕಿ ಹಚ್ಚಿ, ತಾನು ನೀಡಿದ್ದ 10 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ಹಿಂತಿರುಗಿಸುವಂತೆ ಒತ್ತಾಯಿಸಿ ರಂಪಾಟ ನಡೆಸಿದ್ದ ಎಂದು ಆರೋಪಿಸಿ ಮಹಿಳೆ ಮಹಾಗಾವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ಧ ದೂರು ದಾಖಲಾಗಿದ್ದಕ್ಕೆ ಸಿಟ್ಟಾಗಿದ್ದ ಕಾನ್ಸ್ಟೇಬಲ್ ರಾಜಶೇಖರ್, ಮಹಾಗಾವ್ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಚಿತ್ತಕೋಟೆ ಅವರ ವೈಯಕ್ತಿಕ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಆರಂಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಅನುಮಾನಿಸಲಾಗಿತ್ತು. ಆದರೆ ಸಿಸಿಟಿವಿ ಫುಟೇಜ್ ಪರಿಶೀಲನೆಯಲ್ಲಿ ಆರೋಪಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ದೃಢಪಟ್ಟಿದೆ.

ಮಹಿಳೆಯ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಹಾಗೂ ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಮಲಾಪುರ ಸರ್ಕಲ್ ಇನ್‌ಸ್ಪೆಕ್ಟರ್ ಶಿವಶಂಕರ್ ಸಾಹು ಮತ್ತು ಪಿಎಸ್‌ಐ ಬಸವರಾಜ್ ಚಿತ್ತಕೋಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಇಲಾಖೆಯಲ್ಲೇ ಇಂತಹ ಘಟನೆ ನಡೆದಿರುವುದರಿಂದ ಸಾರ್ವಜನಿಕರಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ. ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

ಧಾರವಾಡ | ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ದೈಹಿಕ ಶಿಕ್ಷಣ ವಿಭಾಗದ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...