ಕಲಬುರಗಿ | ಇಂದು ರಾಮ ಮಂದಿರ ಉದ್ಘಾಟನೆಯಲ್ಲ, ಪ್ರಜಾಪ್ರಭುತ್ವ ಕಗ್ಗೊಲೆಯಾದ ದಿನ: ಮೀನಾಕ್ಷಿ ಬಾಳಿ

Date:

Advertisements

ಅಯೋಧ್ಯೆಯಲ್ಲಿ ಒಂದು ಗೋರಿ ಉರುಳಿಸಿ ಇನ್ನೊಂದು ಗೋರಿಯನ್ನೇ ಕಟ್ಟಿದ್ದು ಪ್ರಜಾತಾಂತ್ರಿಕ ವ್ಯವಸ್ಥೆಯ ಸಮಾಧಿಯಾಗಿದೆ. ಆದರೆ ದೇಶದ ಪ್ರಜ್ಞಾವಂತ ಜನರು ನಿಮ್ಮ ಆಟ ನಡೆಸಲು ಬಿಡುವುದಿಲ್ಲ ಎಂದು ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿಯ ಜಗತ್‌ ವೃತ್ತದ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ಶೂದ್ರ ಶಂಭೂಕ ಮುನಿಯವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಇಂದು ಇಡೀ ದೇಶದ ತುಂಬಾ ಸೂತಕದ ಛಾಯೆ ಆವರಿಸಿಕೊಂಡಿದೆ. ಅವರು ಮಾಡುತ್ತಿರುವುದು ರಾಮಮಂದಿರ ಉದ್ಘಾಟನೆ ಅಲ್ಲ, ಸೂತಕ ಮನೆಯ ಗಳ ಹಿರಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮನೆ-ಮನೆಗೆ ಬೆಂಕಿ ಹಚ್ಚಿ ಬೆಂಕಿಯಲ್ಲಿ ಕಾಯಿಸಿಕೊಳ್ಳುವ ರಾಕ್ಷಸಿ ಕೆಲಸ ಮಾಡುತ್ತಿದ್ದಾರೆ, ರಾಮ ಹಾಗೂ ರಾಮ ಸಂಸ್ಕೃತಿಗೆ ನಾವು ಧಿಕ್ಕರಿಸಿ, ಕರಾಳ ದಿನವನ್ನಾಗಿ ಆಚರಿಸಬೇಕು” ಎಂದು ಕರೆ ನೀಡಿದರು.

Advertisements

“ರಾಮ ಮಂದಿರ ತರಾತುರಿಯಲ್ಲಿ ಉದ್ಘಾಟನೆ ಮಾಡುವಲ್ಲಿ ಆ‌ರ್.ಎಸ್.ಎಸ್. ಮತ್ತು ಬಿ.ಜೆ.ಪಿ. ಸರ್ಕಾರದ ಷಡ್ಯಂತ್ರ ಅಡಗಿದೆ. ಸಾಮಾಜಿಕ, ಸಾಂಸ್ಕೃತಿಕವಾಗಿ ದೇಶದ ಮನೋಧರ್ಮವನ್ನು ಬದಲಾಯಿಸುವುದರಲ್ಲಿಯೇ ಆರ್.ಎಸ್.ಎಸ್‌. ಮತ್ತು ಬಿ.ಜೆ.ಪಿ. ಯಶಸ್ವಿಯಾಗಿದೆ. ಕೇವಲ 20 ವರ್ಷಗಳ ಹಿಂದಿನ ದಿನಗಳಿಗಿಂತಲೂ ಇಂದು ದೇಶದಲ್ಲಿ ಹಿಂದುತ್ವ ಪ್ರಮಾಣ ಅಧಿಕವಾಗಿದೆ” ಎಂದರು.

“ದೇಶದಲ್ಲಿ ಮನುಸ್ಮೃತಿ ಹೇರಿ ಮತ್ತೆ ವರ್ಣಾಶ್ರಮ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಇಂದು ರಾಮಮಂದಿರ ಉದ್ಘಾಟನೆಯ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಕಗ್ಗೊಲೆಯಾದ ದಿನ ಎಂದು ಭಾವಿಸಬೇಕು” ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಅರ್ಜುನ ಭದ್ರೆ ಹೇಳಿದರು.

ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಓದಿ ನಂತರ ಶಂಭುಕ ಮುನಿಯವರ ಸ್ಮರಣೆ ಅಂಗವಾಗಿ ಶೋಕಾಚರಣೆ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಲ್ಲಿ ರಾಮ, ರಾಮಾಯಣ, ರಾಮರಾಜ್ಯ, ಮಂದಿರಗಳು…

ಕಾರ್ಯಕ್ರಮದಲ್ಲಿ ಚಿಂತಕ ಆರ್.‌ಕೆ. ಹುಡುಗಿ, ಅಶ್ವಿನಿ ಮದನಕರ್‌, ಪ್ರಭು ಖಾನಾಪುರೆ, ಮಹಾಂತೇಶ ಬಡದಾಳ, ಸೂರ್ಯಕಾಂತ ಅಜಾದಪೂರ ಮಲ್ಲಿಕಾರ್ಜುನ ಖನ್ನಾ, ಮಹೇಶ ಕೋಕಿಲೆ, ಪರಶುರಾಮ ಯಡ್ರಾಮಿ ಸೇರಿದಂತೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X