ಸಚಿವ ಖರ್ಗೆ ಕ್ಷೇತ್ರದಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯುವ ಪುಟ್ಟ ಮಕ್ಕಳು

Date:

Advertisements

ಪ್ರೌಢಶಾಲೆಯಲ್ಲಿ ತಯಾರಿಸುವ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯಬೇಕಾದ ಪರಿಸ್ಥಿತಿಯನ್ನು ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳ ಎದುರಿಸುತ್ತಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದ ಲಾಡ್ಲಾಪುರ ಸರ್ಕಾರಿ ಶಾಲೆಯ ಮಕ್ಕಳು ಇಂತಹ ಕಷ್ಟವನ್ನು ಅನುಭವಿಸುತ್ತಿದ್ದಾರೆ.

ಲಾಡ್ಲಾಪುರದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳು ಬೇರೆ ಬೇರೆ ಕಡೆಗಳಲ್ಲಿವೆ. ಆದರೆ, ಎರಡೂ ಶಾಲೆಗಳಿಗೂ ಇರುವುದು ಒಂದೇ ಅಡುಗೆ ಕೊಠಡಿ. ಅದು ಪ್ರೌಢಶಾಲೆಯಲ್ಲಿದೆ. ಎರಡು ಶಾಲೆಗಳ ನಡುವೆ 1 ಕಿ.ಮೀ ಅಂತರವಿದೆ.

ಹೀಗಾಗಿ, ಮಧ್ಯಾಹ್ನದ ಬಿಸಿಯೂಟ ಪ್ರೌಢಶಾಲೆಯಲ್ಲಿ ತಯಾರಾಗುತ್ತದೆ. ಅದನ್ನು ಸೇವಿಸಲು ಪ್ರಾಥಮಿಕ ಶಾಲೆಯ ಮಕ್ಕಳು ಹೋಗಿ-ಬರಲು ಎರಡು ಕಿ.ಮೀ ನಡೆಯಬೇಕಾಗಿದೆ. ಅದೂ, ರಾಜ್ಯ ಹೆದ್ದಾರಿ ಮತ್ತು ಕೆರೆ ಏರಿಯನ್ನು ಹತ್ತಿ-ಇಳಿದು ಹೋಗಬೇಕು. ಇದರಿಂದಾಗಿ ಮಕ್ಕಳು ನಿತ್ಯವೂ ಯಾತನೆ ಅನುಭವಿಸುವಂತಾಗಿದೆ.

Advertisements

ಈ ಹಿಂದೆ, ಪ್ರೌಢಶಾಲೆಯಲ್ಲಿ ತಯಾರಾದ ಆಹಾರವನ್ನು ಅಡುಗೆ ಸಿಬ್ಬಂದಿಗಳು ಕೊಂಡೊಯ್ದು ಬಡಿಸಿ ಬರುತ್ತಿದ್ದರು. ಆದರೆ, ಈಗ ಅಡುಗೆ ಸಿಬ್ಬಂದಿಗಳ ಕೊರತೆ ಇದೆ. ಪ್ರಾಥಮಿಕ ಶಾಲೆಯಲ್ಲಿ 150 ಮತ್ತು ಪ್ರೌಢಶಾಲೆಯಲ್ಲಿ 450 ಮಕ್ಕಳು – ಒಟ್ಟು 600 ವಿದ್ಯಾರ್ಥಿಗಳಿದ್ದಾರೆ. ಇಷ್ಟು ಬೃಹತ್ ಸಂಖ್ಯೆಯ ವಿದ್ಯಾರ್ಥಿಗಳಿಗೆ ಅಡುಗೆ ಮಾಡುವವರು ಕೇವಲ 4 ಮಂದಿ ಮಾತ್ರ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಡುಗೆ ಸಿಬ್ಬಂದಿಗಳೂ ಇಲ್ಲ. ಹೀಗಾಗಿ, ಪ್ರಾಥಮಿಕ ಶಾಲೆ ಮಕ್ಕಳನ್ನೇ ಊಟಕ್ಕೆ ಪ್ರೌಢಶಾಲೆಗೆ ಕರೆಸಲಾಗುತ್ತಿದೆ ಎಂದು ವರದಿಯಾಗಿದೆ.

ಅಗತ್ಯವಿರುವಷ್ಟು ಅಡುಗೆ ಸಿಬ್ಬಂದಿಗಳನ್ನು ನೇಮಿಸಬೇಕು. ಮೊದಲಿನಂತೆ ಶಾಲೆಗೆ ಅಡುಗೆ ಸಿಬ್ಬಂದಿಯೇ ಊಟವನ್ನು ಕೊಂಡೊಯ್ಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X