ಮೈಸೂರು | ವಿಚಾರಗಳ ಪರಿಣಾಮಕಾರಿ ಅಭಿವ್ಯಕ್ತಿಗೆ ಕನ್ನಡ ಪ್ರಬಲ ಭಾಷೆ : ಸಾಹಿತಿ ಸತೀಶ್ ಜವರೇಗೌಡ

Date:

ಕನ್ನಡ ಭಾಷೆ ನಮ್ಮ ಹೃದಯದ ಭಾಷೆ. ಹಾಗೆಯೇ ಸಂವಹನದ ಭಾಷೆಯ ಜೊತೆಗೆ ಅನ್ನದ ಭಾಷೆಯೂ ಆಗಿದೆ. ನಮ್ಮ ಭಾವನೆ ಮತ್ತು ವಿಚಾರಗಳ ಪರಿಣಾಮಕಾರಿ ಅಭಿವ್ಯಕ್ತಿಗೆ ಸಹಕಾರಿಯಾದ ಪ್ರಬಲ‌ ಮಾಧ್ಯಮವೂ ಆಗಿದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಅಭಿಪ್ರಾಯಪಟ್ಟರು.

- Advertisement -

ಮೈಸೂರು ನಗರದ ದೇವರಾಜ ಮೊಹಲ್ಲಾದಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅದಮ್ಯ ರಂಗಶಾಲೆಯ ವತಿಯಿಂದ ನಡೆದ ಪಿಯುಸಿ ಪಠ್ಯಾಧಾರಿತ ರಂಗ ಪ್ರದರ್ಶನದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಅದಮ್ಯ ಕನ್ನಡ ಪ್ರೇಮಿ – ಚಿಗುರು ಪ್ರತಿಭಾ ಪುರಸ್ಕಾರ’ ಪ್ರದಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅನಾದರ ಭಾವವನ್ನಾಗಲಿ, ಕೀಳರಿಮೆಯ ಭಾವವನ್ನಾಗಲಿ ಬೆಳಸಿಕೊಳ್ಳಬಾರದು. ಬದಲಿಗೆ ‘ನಮ್ಮ ಬದುಕನ್ನು ಕಟ್ಟಿಕೊಡುವ ಭಾಷೆ’ ಎಂಬ ಪ್ರೀತಿ‌ ಮತ್ತು ಅಭಿಮಾನವಿಟ್ಟುಕೊಳ್ಳಬೇಕು. ದಿನನಿತ್ಯದ ಎಲ್ಲಾ ರೀತಿಯ ಸಂವಹನವನ್ನು ಕನ್ನಡ ಭಾಷೆಯಲ್ಲಿಯೇ ಮಾಡಬೇಕು. ಆಗ ಭಾಷೆ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂದು ಹೇಳಿದರು.

IMG 20241113 WA0162

ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಒಂದು ತಲೆಮಾರಿನ ಅನುಭವಗಳಿರುತ್ತವೆ. ಇಂತಹ ಪುಸ್ತಕಗಳನ್ನು ಓದುವ ಮೂಲಕ ಅದನ್ನು ತಮ್ಮದಾಗಿಸಿಕೊಂಡು, ಜ್ಞಾನವನ್ನು ವಿಸ್ತರಿಸಿಕೊಳ್ಳುವ ಅಗತ್ಯವಿದೆ. ಅದರೊಂದಿಗೆ ಕನ್ನಡ ದಿನಪತ್ರಿಕೆಗಳನ್ನೂ ಓದುವ ಹವ್ಯಾಸ ಮೈಗೂಡಿಸಿಕೊಂಡು ಮುನ್ನಡೆದಾಗ ಪ್ರಚಲಿತ ವಿಷಯ ಜ್ಞಾನ ಲಭಿಸಲು ಸಾಧ್ಯ. ಆದ್ದರಿಂದ ಸಾಹಿತ್ಯದ ಪುಸ್ತಕಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಿರಿಯ ಉಪನ್ಯಾಸಕ ಎಂ. ಬಾಲರಾಜ್ ಮಾತನಾಡಿ, ಮೈಸೂರು ಸಾಂಸ್ಕೃತಿಕ ನಗರಿಎಂಬ ಹಿರಿಮೆಯನ್ನು ಹೊಂದಿದೆ. ಇಲ್ಲಿ‌ ಸಾಹಿತಿಗಳು, ವಿಚಾರವಂತರು, ಮೇಧಾವಿಗಳು, ಬುದ್ಧಿಜೀವಿಗಳಿದ್ದಾರೆ. ಅವರ ಒಡನಾಟವನ್ನು ವಿದ್ಯಾರ್ಥಿಗಳು ಹೊಂದುವ ಮೂಲಕ, ತಾವು ಅವರಂತೆಯೇ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ‘ಬುಲ್ಡೋಜರ್ ನ್ಯಾಯ’ ನಿಷೇಧ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ರಮಾನಂದ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕ ಜಿ. ಮಹೇಶ್, ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಹಾಗೂ ಕಾಲೇಜಿನ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿಯರಾದ ಆರ್. ಅಮೃತಾ, ಸಂಜನಾ ಮತ್ತು ಮಾನಸ ಅವರಿಗೆ ‘ಅದಮ್ಯ ಕನ್ನಡ ಪ್ರೇಮಿ – ಚಿಗುರು ಪ್ರತಿಭಾ ಪುರಸ್ಕಾರ’ ಪ್ರದಾನ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...