ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

Date:

ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮುಂಬೈ ಸೇರಿದಂತೆ ಹಲವೆಡೆ ಬ್ಯಾಂಕಿಂಗ್‌ ವೃತ್ತಿಯ ಬಳಿಕ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ನೆಲೆಸಿದ್ದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 1936ರ ಏಪ್ರಿಲ್ 4ರಂದು ಜನಿಸಿದ ಇವರು, ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದು, ಬ್ಯಾಂಕಿಂಗ್ ಪರೀಕ್ಷೆ ಉತ್ತೀರ್ಣರಾಗಿದ್ದರು. ಮುಂಬೈಯಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇರಿ ಬೆಳಗಾವಿ, ಗೋವಾ, ಧಾರವಾಡ, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ ಕಾರ್ಯನಿರ್ವಹಿಸಿ 1996ರಲ್ಲಿ ನಿವೃತ್ತರಾಗಿದ್ದರು.

ಮೊದಲು ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಬರೆಯುತ್ತಿದ್ದ ವೈದ್ಯರು ಬಳಿಕ ಕಾದಂಬರಿಯತ್ತ ಜಿಗಿದರು. ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದ ಇವರು, ‘ಸಂವಾದ’ ಎನ್ನುವ ಸಾಂಸ್ಕೃತಿಕ ಸಂಘಟನೆ ಸ್ಥಾಪಿಸಿದ್ದರು. ಅಲ್ಲಿ ಕನ್ನಡ ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ಸಂವಾದ, ವಾಚನ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

‘ತಲೆಗೊಂದು ತರತರ’, ‘ಮನಸುಖರಾಯನ ಮನಸು’, ‘ರುಚಿಗೆ ಹುಳಿಯೊಗರು’ ಇವರ ಲಲಿತ ಪ್ರಬಂಧಗಳ ಸಂಕಲನಗಳು. ‘ಅಗ್ನಿಕಾರ್ಯ’ ʼಕಪ್ಪೆ ನುಂಗಿದ ಹುಡುಗʼ ಸಣ್ಣ ಕತೆಗಳ ಸಂಕಲನಗಳು. ʼಕರ್ನಲ್‍ನಿಗೆ ಯಾರೂ ಬರೆಯುವುದೇ ಇಲ್ಲʼ ಎಂಬ ಕೃತಿ ಮಾರ್ಕ್ವೇಝ್‍ನ ಕಾದಂಬರಿಯ ಅನುವಾದವಾಗಿದೆ.

ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರ ಮನಸುಖರಾಯನ ಮನಸು ಕೃತಿಗೆ, 2003ರಲ್ಲಿ ’ಪರಮಾನಂದ ಪ್ರಶಸ್ತಿ’,
ಹಾಗೂ 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....