ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

Date:

Advertisements

ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮುಂಬೈ ಸೇರಿದಂತೆ ಹಲವೆಡೆ ಬ್ಯಾಂಕಿಂಗ್‌ ವೃತ್ತಿಯ ಬಳಿಕ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ನೆಲೆಸಿದ್ದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 1936ರ ಏಪ್ರಿಲ್ 4ರಂದು ಜನಿಸಿದ ಇವರು, ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದು, ಬ್ಯಾಂಕಿಂಗ್ ಪರೀಕ್ಷೆ ಉತ್ತೀರ್ಣರಾಗಿದ್ದರು. ಮುಂಬೈಯಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇರಿ ಬೆಳಗಾವಿ, ಗೋವಾ, ಧಾರವಾಡ, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ ಕಾರ್ಯನಿರ್ವಹಿಸಿ 1996ರಲ್ಲಿ ನಿವೃತ್ತರಾಗಿದ್ದರು.

Advertisements

ಮೊದಲು ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಬರೆಯುತ್ತಿದ್ದ ವೈದ್ಯರು ಬಳಿಕ ಕಾದಂಬರಿಯತ್ತ ಜಿಗಿದರು. ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದ ಇವರು, ‘ಸಂವಾದ’ ಎನ್ನುವ ಸಾಂಸ್ಕೃತಿಕ ಸಂಘಟನೆ ಸ್ಥಾಪಿಸಿದ್ದರು. ಅಲ್ಲಿ ಕನ್ನಡ ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ಸಂವಾದ, ವಾಚನ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

‘ತಲೆಗೊಂದು ತರತರ’, ‘ಮನಸುಖರಾಯನ ಮನಸು’, ‘ರುಚಿಗೆ ಹುಳಿಯೊಗರು’ ಇವರ ಲಲಿತ ಪ್ರಬಂಧಗಳ ಸಂಕಲನಗಳು. ‘ಅಗ್ನಿಕಾರ್ಯ’ ʼಕಪ್ಪೆ ನುಂಗಿದ ಹುಡುಗʼ ಸಣ್ಣ ಕತೆಗಳ ಸಂಕಲನಗಳು. ʼಕರ್ನಲ್‍ನಿಗೆ ಯಾರೂ ಬರೆಯುವುದೇ ಇಲ್ಲʼ ಎಂಬ ಕೃತಿ ಮಾರ್ಕ್ವೇಝ್‍ನ ಕಾದಂಬರಿಯ ಅನುವಾದವಾಗಿದೆ.

ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರ ಮನಸುಖರಾಯನ ಮನಸು ಕೃತಿಗೆ, 2003ರಲ್ಲಿ ’ಪರಮಾನಂದ ಪ್ರಶಸ್ತಿ’,
ಹಾಗೂ 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X