ಕಣ್ವ ಹಗರಣ | ಸಿಬಿಐ ತನಿಖೆ ನಡೆಸುವಂತೆ ಸಂತ್ರಸ್ತರ ಆಗ್ರಹ

Date:

Advertisements

1,500 ಕೋಟಿ ರೂಪಾಯಿ ವಂಚನೆಯಾದ ಕಣ್ವ ಸಹಕಾರ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ರಾಜ್ಯದ ಸಂತ್ರಸ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಾದ್ಯಂತ 23,000ಕ್ಕೂ ಹೆಚ್ಚು ಠೇವಣಿದಾರರು ಕಣ್ವ ಹಗರಣದಲ್ಲಿ ಹಣ ಕಳೆದುಕೊಂಡಿದ್ದೇವೆ. ಹಗರಣದ ತನಿಖೆ ನಡೆಸಿ, ತಮಗೆ ನ್ಯಾಯ ಒದಗಿಸುವಂತೆ ಹಲವು ಭಾರಿ ಮನವಿ ಮಾಡಿದರೂ, ಸರ್ಕಾರಗಳು ಕೇವಲ ಭರವಸೆಯನ್ನಷ್ಟೇ ನೀಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ, ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಕಣ್ವ ಹಗರಣದ ಹಕ್ಕುದಾರರ ಹಿತರಕ್ಷಣಾ ವೇದಿಕೆಯ ಮುಖಂಡರು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಶಶಿಲ್ ಜಿ ನಮೋಶಿ ಭೇಟಿ ಮಾಡಿದ್ದಾರೆ. ಹಗರಣದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

“45 ತಿಂಗಳ ತನಿಖೆಯಲ್ಲಿ ಕೇವಲ ಒಂದು ಮಧ್ಯಂತರ ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲ ತನಿಖಾ ತಂಡ ವಿಫಲವಾಗಿದೆ. ತಮ್ಮ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಸಂಪನ್ಮೂಲಗಳಿಲ್ಲದೆ ನರಳುತ್ತಿರುವ ಸಾವಿರಾರು ಜನರು ನ್ಯಾಯ ಸಿಗದೆ ಪರದಾಡುತ್ತಿದ್ದಾರೆ” ಎಂದು ವೇದಿಕೆಯ ಆಡಳಿತಾಧಿಕಾರಿ ಮುರಳೀಧರ ಲಕಣ್ಣವರ ಹೇಳಿದ್ದಾರೆ.

Advertisements

1985ರಲ್ಲಿ ‘ಶ್ರೀ ಕಣ್ವ ಸೌಹಾದ್ರ ಸಹಕಾರಿ ಕ್ರೆಡಿಟ್ ಲಿಮಿಟೆಡ್‌’ನಲ್ಲಿ ಆರ್‌ಡಿ ಮತ್ತು ಎಫ್‌ಡಿಗಳ ರೂಪದಲ್ಲಿ ಹಣವನ್ನು ಠೇವಣಿ ಮಾಡುವಂತೆ ಜನರನ್ನು ಗುಂಪೊಂದು ಪ್ರೇರೇಪಿಸಿತ್ತು. 5.5 ವರ್ಷಗಳಲ್ಲಿ 12% ಬಡ್ಡಿದರ ಅಥವಾ ಠೇವಣಿ ದ್ವಿಗುಣಗೊಳಿಸುವ ಭರವಸೆಯನ್ನೂ ಆ ಗುಂಪು ನೀಡಿತ್ತು. ಅವರ ಮಾತುಗಳನ್ನು ನಂಬಿದ ಹಲವರು ಲಕ್ಷಾಂತರ ರೂಪಾಯಿ ಹಣವನ್ನು ಠೇವಣಿ ಇಟ್ಟಿದ್ದರು. ಅವರಲ್ಲಿ ಕೆಲವರು 2019ರ ಅಕ್ಟೋಬರ್‌ನಲ್ಲಿ ಹಣವನ್ನು ಹಿಂಪಡೆಯಲು ಮುಂದಾದಾಗ ಹಗರಣ ಬಯಲಿಗೆ ಬಂದಿತ್ತು.

ಅಂದಿನ ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದರು. ಸಾರ್ವಜನಿಕ ಒತ್ತಡ ಕೇಳಿಬಂದ ಹಿನ್ನೆಲೆ ಪ್ರಕಣವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ 2023ರ ಜನವರಿಯಲ್ಲಿ ಭರವಸೆ ನೀಡಿದ್ದರು. ಆದರೆ, ಅವರ ಮಾತು ಭರವಸೆಯಾಗಿಯೇ ಉಳಿಯಿತು.

ಸಂತ್ರಸ್ತರಲ್ಲಿ ಒಬ್ಬರಾಗಿರುವ ರಾಜಾಜಿನಗರದ ನಿವಾಸಿ ವಿಮಲಾ ಅವರು 2018ರಲ್ಲಿ ತಮ್ಮ ಉಳಿತಾಯದ ಹಣ 5 ಲಕ್ಷವನ್ನು ಎಫ್‌ಡಿ ಇಟ್ಟಿದ್ದರು. ಬರುವ ಹಣದಲ್ಲಿ ತಮ್ಮ ಅಸ್ವಸ್ಥ ಮಗನಿಗೆ ಚಿಕಿತ್ಸೆ ಮತ್ತು ಶಿಕ್ಷಣ ಕೊಡಿಸಲು ಇಚ್ಛಿಸಿದ್ದರು. ಆದರೆ, ಈಗ ಅವರು ಮೋಸಹೋಗಿದ್ದಾರೆ. ಅವರ ಪತಿ ಕೂಡ ಎರಡು ವರ್ಷಗಳ ಹಿಂದೆ ಸಾವಪ್ಪಿದ್ದಾರೆ. ಇದೆಲ್ಲದರ ಪರಿಣಾಮ ಅವರು ದೈನಂದಿನ ಜೀವನಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X