ಬೀದರ್‌ | ರೈತರಿಗೆ ಕನ್ಯಾ ಕೊಡ್ತಿಲ್ಲ ; ರೈತ ಮಕ್ಕಳಿಗೆ ಮದುವೆಯಾಗುವ ಹೆಣ್ಮಕ್ಕಳಿಗೆ 5 ಲಕ್ಷ ಪ್ರೋತ್ಸಾಹ ಧನ ನೀಡಿ

Date:

Advertisements

ಬೀದರ್‌ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ ತ್ವರಿತವಾಗಿ ರೈತರ ನೆರವಿಗೆ ಧಾವಿಸಿ ಕೃಷಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಗ್ರಹಿಸಿದೆ.

ಬೀದರ್‌ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್‌ ಸ್ವಾಮಿ ನೇತ್ರತ್ವದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ʼಜಿಲ್ಲೆಯ ಕೃಷಿ ಅಭಿವೃದ್ಧಿಯಾಗಬೇಕಾದರೆ ಕೃಷಿ ಆಧಾರಿತ ಕಾರ್ಖಾನೆಯಾದ ಬಿ.ಎಸ್.ಎಸ್.ಕೆ. ಕಾರ್ಖಾನೆಯನ್ನು ಮಂಡ್ಯ ಜಿಲ್ಲೆಯ ಕಾರ್ಖಾನೆಯಂತೆ ಸರಕಾರವೇ ಪುನರಾರಂಭಿಸಬೇಕು. ಜಿಲ್ಲೆಯ ರೈತರ ಕಾರ್ಮಿಕರನ್ನು ರಕ್ಷಣೆ ಮಾಡಬೇಕು. ಬಡ ರೈತರಿಗೆ ಅನ್ಯಾಯವಾಗದಂತೆ ಬರ ಪರಿಹಾರದ ಹಣ ಎಲ್ಲ ರೈತರಿಗೆ ಪಾವತಿಸಬೇಕು. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರಕಾರದ ಎಸ್‌ಡಿಆರ್‌ಎಫ್ ಪಾಲು ಕೊಡಬೇಕುʼ ಎಂದು ಒತ್ತಾಯಿಸಿದರು.

Advertisements

ʼಕಂದಾಯ ಇಲಾಖೆಯಿಂದ ನಡೆಸುವ ಭೂ ಸರ್ವೆಯಲ್ಲಿ ಆಗುತ್ತಿರುವ ಮೋಸ ತಪ್ಪಿಸಬೇಕು. ಬಗರ್ ಹುಕಂ ಸಾಗುವಳಿ ಭೂಮಿಯನ್ನು ರೈತರ ಹೆಸರಿಗೆ ನೋಂದಾಯಿಸಬೇಕು. ಡಿಸಿಸಿ ಬ್ಯಾಂಕಿನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಐದು ಲಕ್ಷದವರೆಗೆ ಕೃಷಿ ಸಾಲ ನೀಡಬೇಕು. ರೈತರಿಗೆ ಕೃಷಿ ಯಂತ್ರೋಪಕರಣ, ಬೀಜ, ಗೊಬ್ಬರ ಹಾಗೂ ಇತರ ಕೃಷಿ ಸಾಮಾಗ್ರಿಗಳನ್ನು ಜಾತಿ ಆಧಾರಿತ ಹಂಚಿಕೆ ಮಾಡದೆ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಸೌಲಭ್ಯ ನೀಡಬೇಕುʼ ಎಂದರು.

ಕೃಷಿ ಮಾಡುವ ರೈತನಿಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿಲ್ಲ. ಆದ್ದರಿಂದ ರೈತರ ಮಕ್ಕಳಿಗೆ ಮದುವೆಯಾದ ಹೆಣ್ಣು ಮಕ್ಕಳಿಗೆ ಸರ್ಕಾರ 5 ಲಕ್ಷ ಪ್ರೋತ್ಸಾಹ ಧನ ಕೊಡಬೇಕು. ಐಟಿ ಸೆಟ್‌ಗಳಿಗೆ ಹಿಂದಿನಂತೆ ಸರ್ಕಾರವೇ ವಿದ್ಯುತ್‌ ನೀಡಬೇಕು. ಖಾಸಗಿ ವಿಮಾ ಕಂಪನಿಗಳಿಂದ ರೈತರಿಗೆ ಮೋಸ ಆಗುತ್ತಿದ್ದು, ರೈತರ ಬೆಳೆ ವಿಮೆಯನ್ನು ಸರಕಾರವೇ ಭರಿಸಬೇಕು ಸೇರಿ ಒಟ್ಟು 12 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಳೆಗೆ ಮೈಲೂರ ಸರ್ಕಾರಿ ಶಾಲೆ ಗೋಡೆ ಕುಸಿತ; ಸಚಿವ ರಹೀಂ ಖಾನ್‌ ಭೇಟಿ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಮುಖಂಡ ಕೊಂಡಿಬಾರಾವ ಪಾಂಡೆ, ರಾಜ್ಯ ಉಪಾಧ್ಯಕ್ಷ ಖಾಸೀಂ ಅಲಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಶಾಂತಮ್ಮಾ ಮೂಲಗೆ, ಭಾಲ್ಕಿ ತಾಲೂಕಾಧ್ಯಕ್ಷ ಭಾವರಾವ್‌ ಬೀರಗಿ, ಬೀದರ್‌ ತಾಲೂಕಾಧ್ಯಕ್ಷ ವಿಠಲರೆಡ್ಡಿ ಆಣದೂರು, ಬಸವಕಲ್ಯಾಣ ತಾಲೂಕಾಧ್ಯಕ್ಷ ರುದ್ರಸ್ವಾಮಿ ಸೇರಿದಂತೆ ಸಂಘದ  ಪ್ರಮುಖರಾದ ಸಂತೋಷ ಗುದಗೆ, ಖಾನ್‌ಸಾಬ್‌, ಸೋಮನಾಥ ಏಣಕೂರ, ಬಸವರಾಜ ಅಷ್ಟೂರೆ, ಗುಂಡೇರಾವ ಕುಲಕರ್ಣಿ, ಕರಬಸಪ್ಪಾ ಹುಡುಗಿ, ಶಿವಕಾಂತ ಖಂಡೆ, ನಾಗಶೆಟ್ಟಿ ಲಂಜವಾಡೆ, ಕಮಳಬಾಯಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X