ಉಡುಪಿ | ಬೆಳ್ಳೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

Date:

Advertisements

ಕಾಪು ವಿಧಾನಸಭಾ ಕ್ಷೇತ್ರದ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ 5 ಕೋಟಿ 5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

1005051477

ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬೆಳ್ಳೆ ಪೇಟೆ ಭಾಗದಲ್ಲಿ ರಸ್ತೆ ಡಾಮರೀಕರಣ – 1 ಕೋಟಿ, ರಾಜ್ಯ ಹೆದ್ದಾರಿ ನಾಲ್ಕು ಬೀದಿಯಿಂದ ಗಣಪತಿಕಟ್ಟೆ ರಸ್ತೆ ಅಭಿವೃದ್ಧಿ 2 ಕೋಟಿ 40 ಲಕ್ಷ, ಕಟ್ಟಿಂಗೇರಿ ಚಕ್ರಬೆಟ್ಟು ಎಸ್.ಸಿ ಕಾಲನಿ ರಸ್ತೆ ಕಾಂಕ್ರೀಟಿಕರಣ – 20 ಲಕ್ಷ, ಕಟ್ಟಿಂಗೇರಿ ಕುಮಾರೊಟ್ಟು ರಸ್ತೆ ಕಾಂಕ್ರೀಟಿಕರಣ – 10 ಲಕ್ಷ, ಪಡುಬೆಳ್ಳೆ ಮದ್ವನಗರ ಕಾಲೋನಿ ರಸ್ತೆ ಅಭಿವೃದ್ಧಿ – 5 ಲಕ್ಷ, ಪಡುಬೆಳ್ಳೆ ಧರ್ಮಶ್ರೀ ಕಾಲೋನಿ ಅಭಿವೃದ್ಧಿ – 5 ಲಕ್ಷ, ಪಡುಬೆಳ್ಳೆ ರಕ್ಷಾಪುರ ಕಾಲೋನಿ ರಸ್ತೆ ಅಭಿವೃದ್ಧಿ – 5 ಲಕ್ಷ ಸೇರಿದಂತೆ ಒಟ್ಟು 3 ಕೋಟಿ 85 ಲಕ್ಷ ರೂಪಾಯಿ ಅನುದಾನದ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ರಾಜ್ಯ ಹೆದ್ದಾರಿ ನಾಲ್ಕು ಬೀದಿಯಲ್ಲಿ ಮೋರಿ ಸಹಿತ ರಸ್ತೆ ಡಾಮರೀಕರಣ – 70 ಲಕ್ಷ ಹಾಗೂ ಪಡುಬೆಳ್ಳೆ ಮುಡುಬೆಳ್ಳೆ ಸಂಪರ್ಕ ರಸ್ತೆ ಅಭಿವೃದ್ಧಿ – 50 ಸೇರಿದಂತೆ 1 ಕೋಟಿ 20 ಲಕ್ಷ ರೂಪಾಯಿ ಕಾಮಗಾರಿಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಂದ್ರ ಶೆಟ್ಟಿ, ಸುಧಾಕರ್ ಪೂಜಾರಿ, ಹರೀಶ್ ಶೆಟ್ಟಿ, ಸಂಧ್ಯಾ ಶೆಟ್ಟಿ, ಮೇರಿ ಡಿಸೋಜ, ಗುರುರಾಜ್ ಭಟ್, ಅಮಿತಾ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ದೇವದಾಸ್ ಕಾಮತ್, ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶಂಕರ ದೇವಾಡಿಗ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X