ಉಡುಪಿ | ಅನುಮತಿ ಪಡೆಯದೆ ಯಕ್ಷಗಾನದಲ್ಲಿ ಮೈಕ್ ಬಳಕೆ, ಪೊಲೀಸರಿಂದ ತಡೆ – ಅಭಿಮಾನಿಗಳ ಆಕ್ರೋಶ

Date:

Advertisements

ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ.

ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆಗೊಂಡಿತ್ತು. ಇಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಸಾರ್ವಜನಿಕರಿಂದ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಧ್ವನಿವರ್ದಕ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಜೆಕಾರು ಉಪನಿರೀಕ್ಷಕ ಶುಭಕರ ಅವರ ನೇತೃತ್ವದಲ್ಲಿ ಪೊಲೀಸರ ತಂಡ ಇಲ್ಲಿಗೆ ಆಗಮಿಸಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಆಯೋಜಕರನ್ನು ಅರೆಸ್ಟ್ ಮಾಡಲು ಮುಂದಾಗಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳದಿಂದ ಪೊಲೀಸರು ತೆರಳಿದ್ದಾರೆ. ಇದೀಗ ಯಕ್ಷಗಾನ ಆಯೋಜಕರ ವಿರುದ್ಧ ಅಜೆಕಾರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 02/2025 ಕಲಂ: 112, 292 BNS ಮತ್ತು 37 ಕೆ.ಪಿ ಆಕ್ಟ್ ರಂತೆ ಪ್ರಕರಣ ದಾಖಲು ಮಾಡಲಾಗಿದೆ.

Advertisements

ಈ ಪ್ರಕರಣದ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು ಕರಾವಳಿ ಭಾಗದಲ್ಲಿ ಗಂಡು ಕಲೆ ಎಂದು ಪ್ರಸಿದ್ದಿಗೊಂಡಿರುವ ಯಕ್ಷಗಾನಕ್ಕೆ ಈ ರೀತಿ ಅವಮಾನ ಆದರೆ ಮುಂದಿನ ಸ್ಥಿತಿಗತಿಗಳನ್ನು ಎಣಿಸುವಾಗ ಚಿಂತಾಜನಕವಾಗಿ ಕಾಣುತ್ತಿದೆ. ಅಧಿಕಾರಿಗಳ ಈ ವರ್ತನೆ ಯಾರನ್ನು ಓಲೈಕೆ ಮಾಡಲಿಕ್ಕಾಗಿ ? ನಿಮಗೆ ತುಳುನಾಡಿನ ಸಂಸ್ಕೃತಿ, ಕಲೆಗಳ ಬಗ್ಗೆ ಗೌರವ ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು ಹೋಗಿ, ಅದನ್ನು ಬಿಟ್ಟು ಇಲ್ಲಿ ನಡೆಯುವ ಕಲೆಗಳಿಗೆ, ಅದನ್ನು ಪೂಜಿಸುವ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಬೇಡಿ.

ಓಲೈಕೆಯ ಅಧಿಕಾರ ಹೆಚ್ಚು ದಿನ ಶಾಶ್ವತವಾಗಿ ಉಳಿಯುವುದಿಲ್ಲ, ನಮ್ಮ ತುಳುನಾಡಿನ ಕಲೆಗಳಿಗೆ ತುಳುನಾಡಿನಲ್ಲಿ ಯಾವುದೇ ಅನುಮತಿಗಳ ಅಗತ್ಯವಿಲ್ಲ. ಯಾಕೆಂದರೆ ನಾವು ಬೆಳೆದಿರುವುದು ಅದರ ಮಧ್ಯದಲ್ಲಿ. ಅದು ನಮ್ಮ ಉಸಿರು, ಅದು ನಮ್ಮ ಜೀವನಾಡಿ. ಈ ಯಕ್ಷಗಾನ ಕಲಾವಿದರಿಗೆ ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಿದ್ದೀರಿ.

ನಿಮ್ಮಂತಹ ಸಂವಿಧಾನವನ್ನು ಕಲಿತವರು ಹೀಗೆ ಮಾಡಿದಲ್ಲಿ ಸಮಾಜಕ್ಕೆ ಕಾನೂನಿನ ಪಾಠ ಯಾರು ಮಾಡುವುದು? ಇದು ಹೀಗೇ ಮುಂದುವರೆದಲ್ಲಿ ನಿಮ್ಮ ಠಾಣೆ ಎದುರಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X