ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

Date:

Advertisements

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಪ್ರತಿಭಟನೆ ಡನೆಸಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಜಯದೇವ ವೃತ್ತದಿಂದ ಉಪವಿಭಾಗಾಧಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. “ತಮಿಳುನಾಡಿಗೆ ನೀರನ್ನು ಹರಿಸುವುದನ್ನು ಕೊಡಲೇ ನಿಲ್ಲಿಸಬೇಕು. ಕರ್ನಾಟಕದ ರೈತರ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಕಾವೇರಿ ನೀರನ್ನು ಹಿಡಿದಿಟ್ಟುಕೊಳ್ಳಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಮಹಿಳಾ ಅಧ್ಯಕ್ಷ ಸುವರ್ಣಮ್ಮ, “ನಮ್ಮಲ್ಲಿ ಮೂಲಭೂತ ಅಗತ್ಯಕ್ಕೆ ಕುಡಿಯುವ ನೀರಿಗೆ ನೀರು ಇಲ್ಲದಿರುವ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ಮಾಣ ಪ್ರಾಧಿಕಾರ ತಮಿಳುನಾಡಿಗೆ ನೀರನ್ನು ಹರಿಸುತ್ತಿರುವುದು ದುರದೃಷ್ಟ, ಈ ಕೂಡಲೇ ನೀರನ್ನು ನಿಲ್ಲಿಸಿ ಕುಡಿಯುವ ನೀರಿಗಾಗಿ ಮತ್ತು ಕರ್ನಾಟಕ ರಾಜ್ಯದ ರೈತರ ಹಿತವನ್ನು ಕಾಪಾಡಬೇಕೆಂದು ಅಗ್ರಹಿಸಿದರು. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಲಿದೆ” ಎಂದು ತಿಳಿಸದರು.

Advertisements

ಸಂಘಟನೆಯ ರಾಜ್ಯಾಧ್ಯಕ್ಷ ಅವಿನಾಶ್, “ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದೆ. ನಮ್ಮಲ್ಲೇ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡಲು ಆದೇಶಿಸಿರುವುದು ವಿವೇಚನಾರಹಿತವಾಗಿದೆ. ಕೂಡಲೇ ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ನಿರ್ವಹಣಾ ಸಮಿತಿಯೊಂದನ್ನು ಮರು ರಚನೆ ಮಾಡಿ ಕಾವೇರಿ ಕೊಳ್ಳದ ಪರಿಸ್ಥಿತಿಯನ್ನು ವಿಶ್ಲೇಷಿಸಿ ರಾಜ್ಯದ ರೈತರ ಮತ್ತು ಕುಡಿಯುವ ನೀರಿನ ಹಿತವನ್ನು ಸಂರಕ್ಷಿಸಬೇಕು. ಕರ್ನಾಟಕದಲ್ಲಿ ರೈತರು ನೀರಿಲ್ಲದೆ ಬೆಳೆಯನ್ನು ಬೆಳೆಯುವುದನ್ನು ನಿಲ್ಲಿಸಿದ್ದಾರೆ. ಆದರೆ, ತಮಿಳುನಾಡಿನ ರೈತ ಬೆಳೆಗೆ ನೀರನ್ನು ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತೊಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಗಳ ಪದಾಧಿಕಾರಿಗಳಾದ ಮಹಿಳಾ ರಾಜ್ಯಾಧ್ಯಕ್ಷರಾದ ಮಾಲ ನಾಗರಾಜ್ ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲಾ ಉಪಾಧ್ಯಕ್ಷ ಆನಂದ್ ಇಟ್ಟಿಗುಡಿ ಉಪಾಧ್ಯಕ್ಷ ವೀರೇಶ್, ಬೋಜರಾಜು ಇತರೆ ಕನ್ನಡ ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X