ಮೈಸೂರು | ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಅನ್ಯಾಯ ಪ್ರಶ್ನಿಸುತ್ತಿದೆ ಕರ್ನಾಟಕ

Date:

Advertisements

ಕರ್ನಾಟಕ ರಾಜ್ಯದಿಂದ ಸರಿಸುಮಾರು 4 ಲಕ್ಷ ಕೋಟಿ ರೂ. ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಆದರೆ, ನಮ್ಮ ಮೇಲೆಯೇ ಮಲತಾಯಿ ಧೋರಣೆ ಅನುಸರಣೆ ಮಾಡುತ್ತಿದೆ. ನಮಗೆ ನ್ಯಾಯಯುತವಾಗಿ ಸಲ್ಲಬೇಕಿದ್ದ ತೆರಿಗೆಯ ಪಾಲು ದಕ್ಕದಾಗಿದೆ. ನಮ್ಮ ಪಾಲು 1.87 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಹಿರಿಯ ಪತ್ರಕರ್ತ ಟಿ ಗುರುರಾಜ್ ಹೇಳಿದ್ದಾರೆ.

ಮೈಸೂರಿನ ಚಿಕ್ಕ ಗಡಿಯಾರದ ಬಳಿ ‘ಕರ್ನಾಟಕ ಜನರಂಗ’ ವೇದಿಕೆ 48 ಗಂಟೆಗಳ ಆಹೋರಾತ್ರಿ ಧರಣಿ ನಡೆಸಿದೆ. ಧರಣಿಯ ಸಮಾರೋಪದಲ್ಲಿ ಅವರು ಮಾತನಾಡಿದರು. “ಕೇಂದ್ರ ಸರ್ಕಾರವು ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಮಾನ್ಯತೆ ನೀಡುತ್ತಿದ್ದು, ಕರ್ನಾಟಕವನ್ನು ಕಡೆಗಣಿಸಿದೆ. ಕೇಂದ್ರದ ಈ ಧೋರಣೆ ಖಂಡಿಸಿ ಮೈಸೂರಿನಿಂದ ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹಲವು ಮಜಲುಗಳಲ್ಲಿ ಹೋರಾಟ ಗಟ್ಟಿಗೊಳ್ಳಲಿದೆ” ಎಂದರು.

“ನಾವು ರಾಜ್ಯದಿಂದ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಕಳಿಸಿದ್ದೇವೆ. ಆದರೆ, ಇದುವರೆಗೆ ಒಬ್ಬರು ಸಹ ತುಟಿಕ್ ಪಿಟಿಕ್ ಅನ್ನಲಿಲ್ಲ. ಕನ್ನಡ ನೆಲ ಜಲ, ನಾಡು ನುಡಿ, ವಿಚಾರದಲ್ಲಿ ಸದಾ ತಾರತಮ್ಯ ಎಸಗುತ್ತಿದ್ದರೂ, ಸಂಸದರು ಮೌನವಾಗಿದ್ದಾರೆ. ಅವರು ಮತ್ತೆ ಮತ ಕೇಳಲು ಬರ್ತಾರೆ, ರಾಜ್ಯದ ಕತೆ ಕೇಳಲು ಬರಲ್ಲ. ಜನರ ಕಷ್ಟ ಕೇಳಲು ಬರಲ್ಲ. ನಮಗೆ ಅನ್ಯಾಯ ಆದರೂ ಬರಲ್ಲ. ಇವರೆಲ್ಲ ಇದ್ದರೂ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಹಿರಿಯ ರಂಗಕರ್ಮಿ ಬಸವಲಿಂಗಯ್ಯ ಮಾತನಾಡಿ, “ಕರ್ನಾಟಕದ ಪಾಲಿಗೆ ಅನ್ಯಾಯವಾದರು ಧ್ವನಿ ಎತ್ತದೆ ಮುಗುಮ್ಮಾಗಿರುವವರ ಸಂಸದರನ್ನು ನೋಡಿ ನಗ ಬೇಕು. ನಾಗರಿಕ ಶಕ್ತಿಯನ್ನು ಕೀಳು ಮಟ್ಟದ ರಾಜಕಾರಣಿಗಳಿಗೆ ತೋರಿಸಬೇಕು. ಭಾರತದ ಶ್ರೀಮಂತರು ದಿನೇ ದಿನೇ ಅತಿ ಶ್ರೀಮಂತರಾಗುತ್ತಿದ್ದಾರೆ. ಬಡವರು ಕಡು ಬಡವರಾಗಿ ಬಸವಳಿಯುತ್ತಿದ್ದಾರೆ. ಅದಾನಿ ಅಂಬಾನಿ ಪರವಾಗಿ ಮೋದಿ ಸರ್ಕಾರ ನಿಂತಿದೆ. ಅವರಿಬ್ಬರ ಶ್ರೀಮಂತಿಕೆ ಕಳೆದ 10 ವರ್ಷಗಳಲ್ಲಿ ಉಚ್ರಯಮಾನ ಸ್ಥಿತಿ ಕಂಡಿದೆ. ಬಡವರು ಕಷ್ಟ ಪಟ್ಟು ದುಡಿದು ಕಟ್ಟಿದ ತೆರಿಗೆ ಹಣವನ್ನು ಕೂಡ ರಾಜ್ಯಕ್ಕೆ ಕೊಡದೆ ವಂಚಿಸಿದೆ” ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ಮಾತನಾಡಿ, “ಡಾ. ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದು ಧೈರ್ಯವಾಗಿ ತನ್ನ ಹಕ್ಕನ್ನ ಕೇಳಬೇಕೆಂದು. ಆದರೆ, ಇವತ್ತಿನ ಸರ್ವಾಧಿಕಾರಿ ಧೋರಣೆಯ ಆಡಳಿತ ವ್ಯವಸ್ಥೆಯಲ್ಲಿ ನಾಗರಿಕರು ಪ್ರಶ್ನೆ ಮಾಡುವುದೇ ತಪ್ಪು ಅನ್ನುವಂತಾಗಿದೆ. ಸಿದ್ದರಾಮಯ್ಯ ಬಡಬಗ್ಗರಿಗೆ ಉಚಿತವಾಗಿ ಅಕ್ಕಿ ನೀಡಿದರೆ, ಆದೆ ಮೋದಿಯವರು 29 ರೂಪಾಯಿಗೆ ಮಾರ್ತಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿದ್ದ ತೆರಿಗೆ ಹಣವನ್ನು ನೀಡದೆ ಇರುವುದು ಸರ್ವಾಧಿಕಾರದ ಅತಿರೇಕ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಬಿ.ಜೆ ವಿಜಯ್ ಕುಮಾರ್, ಇತಿಹಾಸ ತಜ್ಞ ನಂಜರಾಜೆ ಅರಸ್, ಜನಮನ ಗೋಪಾಲ್, ಉಗ್ರನರಸಿಂಹೆ ಗೌಡ, ಜಗದೀಶ್ ಸೂರ್ಯ, ಅಸಾದುಲ್ಲ,
ಸವಿತಾ ಮಲ್ಲೇಶ್ ಸೇರಿದಂತೆ ಹಲವು ಗಣ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೆಜಿ ಅಕ್ಕಿಗೆ ೩೫ ರೂಗಳಂತೆ ಅಯ್ದು ಕೆಜಿ ಅಕ್ಕಿಗೆ ಹಣ ನೀಡಲಾಗುತ್ತಿದೆ.
    ಕೆಜಿಗೆ೨೯ ರುಪಾಯಿಯಂತೆ ಅಕ್ಕಿ ಪಡೆದು, ಹಣ ಉಳಿತಾಯ ಮಾಡಲಿ ಬಿಡಿ!

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X