ಕಲಬುರಗಿ ಅತಿವೃಷ್ಟಿ ಜಿಲ್ಲೆ ಘೋಷಣೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಧರಣಿ

Date:

Advertisements

ಕಲಬುರಗಿ ಜಿಲ್ಲಾದ್ಯಂತ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ತೊಗರಿ, ಹೆಸರು, ಉದ್ದು, ಸೋಯಾಬಿನ್, ಹತ್ತಿ ಸೇರಿದಂತೆ ಇತರೆ ಬೆಳೆಗಳು ಹಾನಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲಿ ರೈತರ ನೆರವಿಗೆ ಧಾವಿಸಿ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಅಹೋರಾತ್ರಿ ಧರಣಿ ನಡೆಸಿದರು.

ಸೋಮವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ ಮುಖಂಡರು, ಬೆಳೆ ನಷ್ಟದ ಸಮೀಕ್ಷೆ ನಡೆಸಿ ತ್ವರಿತವಾಗಿ ಬೆಳೆ ವಿಮೆ ನೀಡಬೇಕು. ಬಾಕಿ ಉಳಿದ ಬೆಳೆ ವಿಮೆ ಪಾವತಿಸಲು ಕ್ರಮಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

‘ಕಲಬುರಗಿ ಜಿಲ್ಲೆ ತೊಗರಿ ನಾಡು ಎಂದೇ ಖ್ಯಾತಿ ಪಡೆದಿದ್ದು, ಇಲ್ಲಿನ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಬೆಳೆದಿಂದಲೇ ಎಂಬುದು ವಾಸ್ತವ. ಆದರೆ, ಅತಿವೃಷ್ಟಿ-ಅನಾವೃಷ್ಟಿಯಿಂದ ರೈತರ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ನಿರೀಕ್ಷೆಯಂತೆ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆʼ ಎಂದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಮಮಶೆಟ್ಟಿ ಮಾತನಾಡಿ, ʼಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಾಶಯ, ನದಿಗಳು ಬಹುತೇಕ ಭರ್ತಿಯಾಗಿ ಪ್ರವಾಹ ಎದುರಾಗಿದೆ. ಇದರಿಂದ ನದಿ, ಜಲಾಶಯ ಸುತ್ತಲಿನ ಪ್ರದೇಶದಲ್ಲಿನ ಬೆಳೆ ಸಂಪೂರ್ಣ ಮುಳುಗಡೆಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆʼ ಎಂದು ಕಳವಳ ವ್ಯಕ್ತಪಡಿಸಿದರು.

ಕಲಬುರಗಿಯನ್ನು ಅತಿವೃಷ್ಟಿ ಜಿಲ್ಲೆ ಎಂದು ಘೋಷಿಸಿ, ವಿಶೇಷ ಪ್ಯಾಕೇಜ್ ಘೋಷಿಸಬೆಕು. ಬಾಕಿ ಉಳಿದ 315 ಕೋಟಿ ಬೆಳೆ ವಿಮೆ ಹಣ ಬಿಡುಗಡೆ ಶೀಘ್ರದಲ್ಲಿ ರೈತರ ಖಾತೆಗೆ ಜಮೆ ಮಾಡಬೇಕು. ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಿ ಎಂ.ಎಸ್. ಸ್ವಾಮಿನಾಥನ್ ಆಯೋಗ ಜಾರಿಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳ ಪತ್ರ ಸರ್ಕಾರಕ್ಕೆ ಸಲ್ಲಿಸಿದರು.

ಇದನ್ನೂ ಓದಿ : ಯಾದಗಿರಿ | ಹೋರಾಟಗಾರರ ಮೇಲಿನ ಸುಳ್ಳು ಅಟ್ರಾಸಿಟಿ ಪ್ರಕರಣ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಅಧ್ಯಕ್ಷ ಅಲ್ತಾಫ ಇನಾಮದಾರ್ ಕರ್ನಾಟಕ ಪ್ರಾಂತ ರೈತ ಸಂಘ ಪದಾಧಿಕಾರಿಗಳು, ಮಹಿಳೆಯರು, ರೈತರು, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X