ಬೀದರ್‌ | ಜಿಲ್ಲೆಯ ಇಬ್ಬರು ಸಾಧಕರಿಗೆ ಒಲಿದ ಕರ್ನಾಟಕ ರಾಜೋತ್ಸವ ಪ್ರಶಸ್ತಿ

Date:

Advertisements

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 69 ಗಣ್ಯರಿಗೆ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಬೀದರ್ ಜಿಲ್ಲೆಯ ಇಬ್ಬರು ಸಾಧಕರು ಪ್ರಸಕ್ತ ಸಾಲಿನ ಕರ್ನಾಟಕ ರಾಜೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಮಾಜ ಸೇವೆ ಕ್ಷೇತ್ರದಲ್ಲಿ ಹೀರಾಚಂದ್‌ ವಾಗ್ಮಾರೆ ಹಾಗೂ ಜಾನಪದ ಕ್ಷೇತ್ರದಲ್ಲಿ ಅಂಧ ಕಲಾವಿದ ನರಸಿಂಹಲು ಅವರು ಆಯ್ಕೆಯಾಗಿದ್ದಾರೆ.

ಹೀರಾಚಂದ್‌ ವಾಗ್ಮಾರೆ ಅವರು ಮೂಲತಃ ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದವರು. ವಿದ್ಯಾರ್ಥಿ ಜೀವನದಿಂದಲೇ ಚಳವಳಿಯಲ್ಲಿ ಆಸಕ್ತಿ ಬೆಳೆಸಿಕೊಂಡು ವಿನೋಬಾ ಭಾವೆ ಅವರೊಂದಿಗೆ ಭೂದಾನ ಚಳವಳಿಯಲ್ಲಿ ಪಾಲ್ಗೊಂಡಿದ್ದರು. ಎಂ.ಎ (ಅರ್ಥಶಾಸ್ತ್ರ) ದಲ್ಲಿ ಪದವಿಧರರಾದ ಹೀರಾಚಂದ್‌ ಅವರಿಗೆ ಇದೀಗ 95 ವರ್ಷ ವಯಸ್ಸು.

Advertisements

ಗಾಂಧೀಜಿ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಮದುವೆ ಆಗದೇ ಒಂಟಿಯಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಕಳೆಯುತ್ತಿದ್ದಾರೆ. ಈ ಹಿಂದೆ ಭಾಲ್ಕಿಯಲ್ಲಿ ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿ ಕೆಲ ಕಾಲ ಉಪನ್ಯಾಸಕರಾಗಿ ದುಡಿದಿದ್ದಾರೆ. ಅಲ್ಲದೇ ಖಾದಿ ಗ್ರಾಮೋದ್ಯೋಗದಲ್ಲಿ ತೊಡಗಿಸಿಕೊಂಡು ಗಾಂಧೀಜಿ ಆದರ್ಶಗಳನ್ನು ಮುನ್ನಡೆಸಿದರು.

ʼನಾನು ಸನ್ಯಾಸಿ ಜೀವನ ನಡೆಸುತ್ತಿದ್ದೇನೆ. ಇಡೀ ಬದುಕು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದೇನೆ, ಎಲ್ಲ ಕ್ಷೇತ್ರದಲ್ಲಿ ದೇಶ ಪ್ರಗತಿ ಸಾಧಿಸಬೇಕು. ರಾಜೋತ್ಸವ ಪ್ರಶಸ್ತಿಗೆ ನಾನು ಅರ್ಜಿ ಹಾಕಲಿಲ್ಲ. ಇಳಿ ವಯಸ್ಸಿನಲ್ಲಿ ನನ್ನನ್ನು ಸರ್ಕಾರ ಗುರುತಿಸಿದೆ. ಆದರೆ, ಮಾನವ ಜನಾಂಗ ನೆಮ್ಮದಿಯಿಂದ ಜೀವನ ನಡೆಸಿದರೆ ಮಾತ್ರ ನನಗೆ ಸಂತಸ ಸಿಗುತ್ತದೆʼ ಎಂದು ಹೀರಾಚಂದ್‌ ವಾಗ್ಮಾರೆ ಅವರು ಈದಿನ.ಕಾಮ್‌ ಜೊತೆಗೆ ಮಾತನಾಡಿ ಅಭಿಪ್ರಾಯ ಹಂಚಿಕೊಂಡರು.

ಅಂಧ ಕಲಾವಿದನಿಗೆ ಒಲಿದ ರಾಜೋತ್ಸವ ಗರಿ :

ಅಂಧ ಜಾನಪದ ಕಲಾವಿದ ನರಸಿಂಹಲು ಅವರು 1963ರಲ್ಲಿ ಜನಿಸಿದ್ದಾರೆ. ಸದ್ಯ ಬೀದರ್‌ ನಗರದ ಗುಂಪಾದಲ್ಲಿ ನೆಲೆಸಿರುವ ನರಸಿಂಹಲು ಬಿ.ಎ ಪದವಿಧರರು. ಕಲಾವಿದ ನರಸಿಂಹಲು ಡಪ್ಪೂರ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ವಿದ್ವತ್‌ ಪಡೆದಿದ್ದಾರೆ. ಸುಮಾರು‌ 30 ವರ್ಷಗಳಿಂದ ಜಾನಪದ ಗಾಯನ, ಮೊಹರಂ ಪದ, ಹಂತಿ ಪದ, ತತ್ವಪದ ಹಾಗೂ ಸುಗಮ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ʼನನಗೆ 5 ವರ್ಷ ಇದ್ದಾಗಲೇ ಎರಡು ಕಣ್ಣು ಕಳೆದುಕೊಂಡೆ, ಮುಂದೆ ಕಲಬುರಗಿಯಲ್ಲಿ ಶಿಕ್ಷಣ ಪಡೆದು, ನಂತರ ಜಾನಪದ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಅಭ್ಯಾಸ ನಡೆಸಿ ಅದನ್ನೇ ಪ್ರವೃತ್ತಿಯನ್ನಾಗಿಸಿಕೊಂಡೆ, ಜಾನಪದ ಕಲಾ ಸೇವೆಯೊಂದಿಗೆ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆ, ಬಾಲ ಭವನ ಸೇರಿದಂತೆ ಇನ್ನಿತರ ಕಡೆ ಸಂಗೀತ ಶಿಕ್ಷಕನಾಗಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇದೀಗ ನನ್ನ ಸೇವೆ ಗುರುತಿಸಿ ಸರ್ಕಾರ ನನ್ನನ್ನು ರಾಜೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆʼ ಎಂದು ಈದಿನ.ಕಾಮ್‌ ಜೊತೆಗೆ ಮಾತನಾಡಿ ಖುಷಿ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X