ರಾಷ್ಟ್ರೀಯ ಹೆದ್ದಾರಿಯ ಅಪಘಾತ ಸ್ಪಾಟ್‌ಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

Date:

Advertisements

ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ 5,803 ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬ್ಲ್ಯಾಕ್‌ ಸ್ಪಾಟ್‌ ಎಂದು ಕರೆಯಲಾಗುತ್ತದೆ. ಈ ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಅತಿ ಹೆಚ್ಚು ತಮಿಳುನಾಡಿನಲ್ಲಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಗುರವಾರ ನಡೆದ ಚರ್ಚೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. 2018ರಿಂದ 2020ರವೆಗೆ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಅವರು ಅಂಕಿ-ಅಂಶಗಳನ್ನು ನೀಡಿದ್ದಾರೆ. ಆದರೆ, 2020ರ ನಂತರದಲ್ಲಿ ಗುರುತಿಸಲಾಗಿರುವ ಬ್ಲ್ಯಾಕ್‌ಸ್ಪಾಟ್‌ಗಳ ಬಗ್ಗೆ ಗಡ್ಕರಿ ಅವರು ಮಾಹಿತಿ ನೀಡಿಲ್ಲ.

2020ರ ಹಿಂದಿನ ಅಂಕಿಅಂಶಗಳನ್ನು ಒದಗಿಸಿರುವ ಸಚಿವರು, “ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 5,803 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಅತಿ ಹೆಚ್ಚು ಬ್ಲ್ಯಾಕ್‌ಸ್ಪಾಟ್‌ಗಳನ್ನು ತಮಿಳುನಾಡು ಹೊಂದಿದೆ. ಎರಡನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, ಮೂರನೇ ಸ್ಥಾನದಲ್ಲಿ ಕರ್ನಾಟಕ ಹಾಗೂ ನಾಲ್ಕನೇ ಸ್ಥಾನದಲ್ಲಿ ತೆಲಂಗಾಣ ಇದೆ” ಎಂದು ಹೇಳಿದ್ದಾರೆ.

Advertisements

“ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನಿರ್ದಿಷ್ಟ 500 ಮೀ. ಉದ್ದದ ರಸ್ತೆಯಲ್ಲಿ ಮೂರು ವರ್ಷಗಳಲ್ಲಿ ಕನಿಷ್ಟ 5 ರಸ್ತೆ ಅಪಘಾತಗಳು ಸಂಭವಿಸಿದ್ದರೆ ಹಾಗೂ 10 ಮಂದಿ ಗಾಯಗೊಂಡಿದ್ದರೆ ಅಥವಾ ಸಾವನ್ನಪ್ಪಿದ್ದರೆ, ಆ ಸ್ಥಳವನ್ನು ಬ್ಲ್ಯಾಕ್‌ಸ್ಪಾಟ್‌ ಎಂದು ಗುರುತಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಅಂತಹ ಬ್ಲ್ಯಾಕ್‌ಸ್ಪಾಟ್‌ಗಳು ಕರ್ನಾಟಕದಲ್ಲಿ 551 ಇವೆ. ಅವುಗಳ ಪೈಕಿ ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲೇ ನಾಲ್ಕು ಪ್ರಮುಖ ಬ್ಲ್ಯಾಕ್‌ಸ್ಪಾಟ್‌ಗಳಿವೆ. ರಾಮನಗರ ಬಳಿಯ ಅಗರ ಕ್ರಾಸ್, ಮಾಯಗಾನಹಳ್ಳಿ, ಲಕ್ಷ್ಮೀಪುರ ಮಂದಿರ ಹಾಗೂ ಮಂಡ್ಯದ ಪಿಎಸ್‌ ಕ್ರಾಸ್‌ಅನ್ನು ಬ್ಲ್ಯಾಕ್‌ಸ್ಪಾಟ್‌ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಮತ್ತು ನಿರ್ವಹಣೆಗಾಗಿ 2018-19ರಿಂದ 2022-23ರ ನಡುವೆ 15,702.80 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಹಲವು ಬ್ಲ್ಯಾಕ್‌ಸ್ಪಾಟ್‌ಗಳನ್ನೂ ದುರಸ್ತಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಮೋದಿ ಬೂಟಾಟಿಕೆ ಮನುಷ್ಯ : ಕಾಂಗ್ರೆಸ್‌ ಟೀಕೆ

‘2018-19ರಿಂದ 2022-23ರ ವರ್ಷದವರೆಗಿನ ಐದು ವರ್ಷದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್​ಎಚ್​ಎಐ ರಸ್ತೆಗಳ ದುರಸ್ತಿ ಮತ್ತು ಪಾಲನೆಗೆ 15,702.80 ಕೋಟಿ ರೂ ವೆಚ್ಚ ಮಾಡಿದೆ. ಇದರಲ್ಲಿ ಬ್ಲ್ಯಾಕ್ ಸ್ಪಾಟ್​ಗಳ ದುರಸ್ತಿಯ ವೆಚ್ಚವೂ ಸೇರಿದೆ’ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಗಡ್ಕರಿ ಅವರು ನೀಡಿರುವ ಮಾಹಿತಿಯಂತೆ, ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ 748 ಬ್ಲ್ಯಾಕ್‌ಸ್ಪಾಟ್‌ಗಳಿವೆ. ಪಶ್ಚಿಮ ಬಂಗಾಳದಲ್ಲಿ 701, ಕರ್ನಾಟಕದಲ್ಲಿ 551 ಹಾಗೂ ತೆಲಂಗಾಣದಲ್ಲಿ 485 ಬ್ಲ್ಯಾಕ್‌ಸ್ಪಾಟ್‌ಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X