ಉಡುಪಿ | ನಿರಾಧಾರ ಆರೋಪಗಳನ್ನು ಮಾಡುವುದು ಬಿಟ್ಟು ಸತ್ಯವನ್ನು ಒಪ್ಪಿಕೊಳ್ಳಿ

Date:

Advertisements

ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕು ಕುಂಜಾಲು ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ದನದ ರುಂಡ ರಸ್ತೆಯಲ್ಲಿ ಸಿಕ್ಕಿದ್ದು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ನಿನ್ನೆ ದಿನ ವಿಶ್ವ ಹಿಂದೂ ಪರಿಷತ್ ನ ನಾಯಕ ಶರಣ್ ಪಂಪ್ವೆಲ್ ರವರು ಇದರ ಹಿಂದೆ ಮುಸ್ಲಿಮರ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದು ಮುಸ್ಲಿಮರನ್ನು ಜಿಹಾದಿಗಳೆಂದು ನಿಂದಿಸಿದ್ದಾರೆ. ಇದನ್ನು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಅವರ ಹೇಳಿಕೆಗೆ ಏನಾದರೂ ಪುರಾವೆಗಳಿದ್ದಲ್ಲಿ ಅದನ್ನು ಪೊಲೀಸರಿಗೆ ನೀಡಿ ತನಿಕೆಗೆ ಸಹಕರಿಸುವುದು ಬಿಟ್ಟು ಸಾರ್ವಜನಿಕವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಕೋಮು ವಿಷವನ್ನು ಹರಡುವುದನ್ನು ಬಿಡಬೇಕು.

ಅದಲ್ಲದೆ ಇದ್ದರೆ ಶರಣ್ ಪಂಪುವೆಲ್ ರನ್ನು ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸುವುದರ ಮೂಲಕ ಬಂದಿಸಿ ಹೆಚ್ಚಿನ ತನಿಖೆ ನಡೆಸಬೇಕಾಗಿ ಕೇಳಿಕೊಳ್ಳುತ್ತಾ ಇದೆ. ಅದೇ ರೀತಿ ಕುಂಜಾಲ್ ಮತ್ತು ಪುತ್ತೂರಿನ ಘಟನೆಗಳಿಂದ ಹಿಂದೂ ರಕ್ಷಕರೆನಿಸಿಕೊಂಡಿರುವವರ ನೈಜ ಬಣ್ಣ ಸಮಾಜದ ಮುಂದೆ ಬಯಲಾಗಿದ್ದು ಅದನ್ನು ಮುಚ್ಚಿಕೊಳ್ಳಲು ಶರಣ್ ರವರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಇದ್ದಾರೆ ಅವರು ಸತ್ಯವನ್ನು ಒಪ್ಪಿಕೊಳ್ಳಬೇಕು ಹಾಗೂ ಮುಸ್ಲಿಮರ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಅದಲ್ಲದೆ ಇದ್ದರೆ ಇಲ್ಲಿನ ಮುಸ್ಲಿಂರು ಸೌಹಾರ್ದ ಪ್ರೇಮಿ ಜನರೊಂದಿಗೆ ಮತ್ತು ಸಂಘಟನೆಗಳೊಂದಿಗೆ ಸೇರಿಕೊಂಡು ಅದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X