ಕಾರವಾರ | 20 ವರ್ಷಗಳ ಸೇವೆ ಬಳಿಕ ‘ಸಾವಿತ್ರಿಬಾಯಿ ಫುಲೆ’ ಕೋಸ್ಟ್ ಗಾರ್ಡ್ ಹಡಗು ಸೇವಾ ನಿವೃತ್ತಿ

Date:

ಭಾರತೀಯ ತಟ ರಕ್ಷಣಾ ಪಡೆಯ ಕಾರವಾರ ಘಟಕದಲ್ಲಿ ಸುಮಾರು 20 ವರ್ಷಗಳ ಕಾಲ ದೇಶದ ಸಮುದ್ರ ಗಡಿ ಹಾಗೂ ಕರಾವಳಿ ಭದ್ರತೆಯಲ್ಲಿ ಸೇವೆ ಸಲ್ಲಿಸಿದ್ದ ‘ಸಾವಿತ್ರಿಬಾಯಿ ಫುಲೆ’ ಹಡಗಿಗೆ ಶನಿವಾರ ಸಂಜೆ ಕಾರವಾರ ಬಂದರಿನ ಕೋಸ್ಟ್ ಗಾರ್ಡ್ ಜೆಟ್ಟಿಯಲ್ಲಿ ಗೌರವಯುತ ವಿದಾಯ ನೀಡಲಾಯಿತು. ಇದೇ ವೇಳೆ ಹಡಗನ್ನು ಅಧಿಕೃತವಾಗಿ ಡಿ-ಕಮಿಷನ್ ಮಾಡಲಾಯಿತು.

- Advertisement -

ಸೂರ್ಯಾಸ್ತದ ಬಳಿಕ ನಡೆದ ಸಮಾರಂಭದಲ್ಲಿ ಹಡಗಿನ ಮೇಲಿದ್ದ ಕೋಸ್ಟ್ ಗಾರ್ಡ್ ಧ್ವಜ ಹಾಗೂ ರಾಷ್ಟ್ರಧ್ವಜವನ್ನು ಕೊನೆಯ ಬಾರಿಗೆ ಗೌರವಪೂರ್ವಕವಾಗಿ ಕೆಳಗಿಳಿಸಲಾಯಿತು. ಬಳಿಕ ಹಡಗಿನ ಉದ್ದಕ್ಕೆ ಸಮನಾದ ‘ಪೇಯಿಂಗ್ ಆಫ್ ಪೆನ್ನಂಟ್’ ಅನ್ನು ಕೆಳಗಿಳಿಸುವ ಮೂಲಕ ಅದರ ಸೇವಾ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕೋಸ್ಟ್ ಗಾರ್ಡ್ ಸಿಬ್ಬಂದಿಯಿಂದ ಗೌರವ ವಂದನೆಯನ್ನೂ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೋಸ್ಟ್ ಗಾರ್ಡ್ ಡಿಐಜಿ ಪ್ರವೀಣ್ ಕುಮಾರ್ ಮಿಶ್ರಾ, ‘ಸಾವಿತ್ರಿಬಾಯಿ ಫುಲೆ’ ಹಡಗು ಕೇವಲ ಉಕ್ಕು ಮತ್ತು ಯಂತ್ರಗಳಿಂದ ನಿರ್ಮಿತವಾಗಿರಲಿಲ್ಲ. ಅದರಲ್ಲಿದ್ದ ಕಮಾಂಡರ್‌ಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಯ ಶ್ರಮದಿಂದ ಅದು ಜೀವಂತವಾಗಿತ್ತು ಎಂದರು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಕಳೆದ ಎರಡು ದಶಕಗಳಲ್ಲಿ ಹಡಗು ಭಾರತದ ಸಮುದ್ರ ಗಡಿ ಕಾವಲು ಹಾಗೂ ಕರಾವಳಿ ಭದ್ರತೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದೆ. ಕಠಿಣ ಹವಾಮಾನ, ಮಳೆ ಮತ್ತು ಬಿರುಗಾಳಿಯ ನಡುವೆಯೂ ಗಸ್ತು ನಡೆಸಿದ್ದು, ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಮೀನುಗಾರರು ಹಾಗೂ ನಾವಿಕರಿಗೆ ನೆರವು ನೀಡಿದೆ ಎಂದು ಹೇಳಿದರು.

ದೇಶದ ಭದ್ರತೆಗೆ ಸವಾಲು ಒಡ್ಡುವ ಶಕ್ತಿಗಳಿಗೆ ಕಟ್ಟುನಿಟ್ಟಿನ ಪ್ರತ್ಯುತ್ತರ ನೀಡುವ ಸಾಮರ್ಥ್ಯದ ಸಂಕೇತವಾಗಿದ್ದ ಈ ಹಡಗು ಸಕ್ರಿಯ ಸೇವೆಯಿಂದ ನಿವೃತ್ತಿಯಾಗುತ್ತಿದ್ದರೂ, ಕರಾವಳಿ ಕಾವಲು ಪಡೆಯ ಇತಿಹಾಸದಲ್ಲಿ ಅದರ ಕೊಡುಗೆ ಹಾಗೂ ಪರಂಪರೆ ಮುಂದುವರಿಯಲಿದೆ ಎಂದರು. ಹಡಗಿನಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳು, ನಾವಿಕರು, ತಾಂತ್ರಿಕ ಸಿಬ್ಬಂದಿ, ಎಂಜಿನಿಯರ್‌ಗಳು, ಎಲೆಕ್ಟ್ರಿಷಿಯನ್‌ಗಳು, ಶಸ್ತ್ರಾಸ್ತ್ರ ತಜ್ಞರು ಹಾಗೂ ಲಾಜಿಸ್ಟಿಕ್ಸ್ ತಂಡದ ಸೇವೆಯನ್ನು ಅವರು ಸ್ಮರಿಸಿದರು.

ಸಾವಿತ್ರಿಬಾಯಿ ಫುಲೆ’ ಹಡಗಿನ ಕಮಾಂಡಿಂಗ್ ಆಫೀಸರ್ ಕಮಾಂಡೆಂಟ್ ಗೌರವ್ ಶ್ರೀವಾಸ್ತವ್ ಮಾತನಾಡಿ, ಅಕ್ಟೋಬರ್ 28, 2006ರಂದು ಸೇವೆಗೆ ಸೇರ್ಪಡೆಯಾದ ಹಡಗು ಕಳೆದ 20 ವರ್ಷಗಳಲ್ಲಿ ಸಮುದ್ರ ಗಡಿ ಕಾವಲಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಹಡಗು ತನ್ನ ಸೇವಾವಧಿಯಲ್ಲಿ ಸುಮಾರು 78,468 ನಾಟಿಕಲ್ ಮೈಲುಗಳಷ್ಟು ಗಸ್ತು ನಡೆಸಿದೆ.

14 ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಹಾಗೂ 4 ವೈದ್ಯಕೀಯ ತೆರವು ಕಾರ್ಯಾಚರಣೆಗಳಲ್ಲಿ ಭಾಗವಹಿಸಿ 71 ಮಂದಿಯ ಪ್ರಾಣ ರಕ್ಷಿಸಿದೆ. ಅಲ್ಲದೆ, 2 ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ತಿಳಿಸಿದರು.

2006-07, 2010-11 ಹಾಗೂ 2014ರಲ್ಲಿ ಅತ್ಯುತ್ತಮ ‘ಸರ್ಚ್ ಅಂಡ್ ರೆಸ್ಕ್ಯೂ ಯೂನಿಟ್’ ಪ್ರಶಸ್ತಿಯನ್ನೂ ಹಡಗು ಪಡೆದುಕೊಂಡಿತ್ತು. ಗೋವಾ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಸ್ವದೇಶಿಯಾಗಿ ನಿರ್ಮಾಣಗೊಂಡಿದ್ದ ಈ ಹಡಗು ಆತ್ಮನಿರ್ಭರ ಭಾರತದ ಪ್ರಯತ್ನಕ್ಕೆ ಸಾಕ್ಷಿಯಾಗಿತ್ತು ಎಂದು ಗೌರವ್ ಶ್ರೀವಾಸ್ತವ್ ಹೇಳಿದರು.

ಕಾರ್ಯಕ್ರಮದಲ್ಲಿ ಕೋಸ್ಟ್ ಗಾರ್ಡ್ ಕಾರವಾರದ ಕಮಾಂಡರ್ ಅಖಿಲ್ ಯಾದವ್, ಡಿಎಫ್‌ಒ ಆಂತೋಣಿ ಮರಿಯಪ್ಪ, ಸಿಐಎಸ್‌ಎಫ್ ಕೈಗಾ ಕಮಾಂಡಿಂಗ್ ಆಫೀಸರ್ ಅಜಯ್ ಕುಮಾರ್ ಝಾ, ನಿವೃತ್ತ ಡಿಐಜಿ ಮನೋಜ್ ಬಾಡ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...