ಕಾರವಾರ | ಬಳಕೆಯಾಗದೆ ಪಾಳುಬೀಳುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ

Date:

Advertisements

ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸುಮಾರು 2 ಕೋಟಿ ವೆಚ್ಚದಲ್ಲಿ 2018ರಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ನಗರದ ಬಾಡಿಗೆ ಕಟ್ಟಡವೊಂದರಲ್ಲಿ ಬಾಲಕರ ನಿಲಯ ನಡೆಸುತ್ತಿದ್ದು ವಾರ್ಷಿಕವಾಗಿ ಲಕ್ಷಾಂತರ ರೂ. ಬಾಡಿಗೆಯನ್ನು ಕಟ್ಟಲಾಗುತ್ತಿದೆ. ಕೋಟ್ಯಂತರ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದರೂ ಈ ಸೌಲಭ್ಯ ಉಪಯೋಗಕ್ಕೆ ಇಲ್ಲದಂತಾಗಿದೆ. ಬಳಕೆಯಾಗದೆ, ಕಟ್ಟಡದ ಆವರಣದಲ್ಲಿ ಆಳೆತ್ತರದವರೆಗೆ ಗಿಡಗಂಟಿಗಳು ಬೆಳೆದು ನಿಂತಿವೆ.

ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಜವಾಡದಲ್ಲಿನ ಗಜನಿ ಭೂಮಿಯಲ್ಲಿ ಕಟ್ಟಡ ನಿರ್ಮಿಸಿರುವುದಕ್ಕೆ ಆರಂಭದಿಂದಲೂ ಆಕ್ಷೇಪ ವ್ಯಕ್ತವಾಗಿತ್ತು. ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುವ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಜನವಸತಿಯಿಂದ ದೂರವಿರುವ ಜಾಗದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದಕ್ಕೂ ಜನರ ವಿರೋಧವಿದೆ.

Advertisements

ಕಟ್ಟಡ ಪೂರ್ಣಗೊಂಡರೂ ವಿದ್ಯುತ್ ಸಂಪರ್ಕ, ರಸ್ತೆ ಸೌಕರ್ಯ ಇರಲಿಲ್ಲ. ಇತ್ತೀಚೆಗೆ ವಿದ್ಯುತ್ ಸಂಪರ್ಕ, ಕಟ್ಟಡದ ದುರಸ್ತಿಗೆ ಕೆಆರ್ಐಡಿಎಲ್‌‍ಗೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎಫ್.ಯು.ಪೂಜಾರ ಮಾದ್ಯಮಗಳಿಗೆ ಉತ್ತರಿಸಿದ್ದು, ಮುಖ್ಯ ರಸ್ತೆಯಿಂದ ವಿದ್ಯಾರ್ಥಿ ನಿಲಯಕ್ಕೆ ರಸ್ತೆ ನಿರ್ಮಿಸಲು 47ಲಕ್ಷ ರೂ. ಪ್ರಸ್ತಾವ ಸಲ್ಲಿಸಲಾಗಿದೆ ಎಂದಿದ್ದಾರೆ.

ಕೋಟ್ಯಂತರ ರೂ. ಅನುದಾನ ಬಳಸಿ ಯೋಜನೆ ರೂಪಿಸುವ ಮೊದಲು ಮೂಲಸೌಕರ್ಯಗಳ ಬಗ್ಗೆ ಗಮನಹರಿಸಿಲ್ಲ. ರಸ್ತೆಯೇ ಇಲ್ಲದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ನಿರ್ಜನವಾಗಿರುವ ಮತ್ತು ಗಜನಿ ಭೂಮಿಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದು ಸರಿಯಲ್ಲ. ಕಟ್ಟಡ ನಿರ್ಮಿಸಿ ನಾಲ್ಕು ವರ್ಷ ಕಳೆದರೂ ಅಗತ್ಯ ವ್ಯವಸ್ಥೆ ಕಲ್ಪಿಸದೇ ಖಾಸಗಿ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯ ನಡೆಸುತ್ತಿದ್ದು ಸರ್ಕಾರದ ಹಣ ಪೋಲು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X