ಉತ್ತರ ಕನ್ನಡ | ನಗರಸಭೆ ಮಾಜಿ ಸದಸ್ಯನ ಕೊಲೆ ಪ್ರಕರಣ: ಐವರು ಪೊಲೀಸರ ಅಮಾನತು

Date:

Advertisements

ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕಾರವಾರ ಪೊಲೀಸ್ ಠಾಣೆಯ ಎಸ್‌ಐ, ಇಬ್ಬರು ಗುಪ್ತ ಮಾಹಿತಿ ವಿಭಾಗದ ಸಿಬ್ಬಂದಿ, ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮನತು ಮಾಡಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಆದೇಶಿಸಿದ್ದಾರೆ.

ನಗರಸಭೆ ಮಾಜಿ ಸದಸ್ಯ ಸತೀಶ್ ಹೆಸರು ರೌಡಿಶೀಟರ್‌ಗಳ ಪಟ್ಟಿಯಲ್ಲಿತ್ತು. ಹೀಗಾಗಿ, ಅವರ ಚಲನವಲನದ ಮೇಲೆ ನಿಗಾ ಇಡಬೇಕಿತ್ತು. ಆದರೆ, ಅವರ ಮೇಲೆ ಪೊಲೀಸರು ನಿಗಾ ಇಟ್ಟಿರಲಿಲ್ಲ ಎಂದು ಆರೋಪಿಸಲಾಗಿದೆ.

Advertisements

ಮೃತ ಸತೀಶ್ ಮತ್ತು ಹತ್ಯೆ ಆರೋಪಿ ನಿತೇಶ್ ನಡುವೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇತ್ತು. ಸತೀಶ್ ವಿರುದ್ಧ ನಿತೇಶ್ ಕೆಲವು ತಿಂಗಳ‌ ಹಿಂದೆಯೇ ದೂರು ದಾಖಲಿಸಿದ್ದರು. ಆದರೆ, ಪ್ರಕರಣದ ತನಿಖೆಯಲ್ಲಿ‌ ಪೊಲೀಸರು ನಿರ್ಲಕ್ಷ್ಯ ಧೋರಣೆ ಹೊಂದಿದ್ದರು. ಅವರ ನಿರ್ಲಕ್ಷ್ಯವೂ ಕೊಲೆಗೆ ದಾರಿ ಮಾಡಿಕೊಟ್ಟಿದೆ ಎಂದು ದೂರಲಾಗಿದೆ.

ತನಿಖೆಯಲ್ಲಿ ನಿರ್ಲಕ್ಷ್ಯ, ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X