ಉಡುಪಿ | ಕಟಪಾಡಿಯಲ್ಲಿ ಎಸ್ ಡಿ ಪಿ ಐ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

Date:

Advertisements

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಇದಕ್ಕೂ ಮುಂಚೆ ಎಸ್ ಡಿ ಪಿ ಐ ಕಟಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಾಹಿದ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಎಸ್ ಡಿ ಪಿ ಐ ಕಟಪಾಡಿ ಗ್ರಾಮ ಸಮಿತಿ ಕಚೇರಿಯಲ್ಲಿ ನಡೆದ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಮತಾ ಶೆಟ್ಟಿಯವರು ಆಗಮಿಸಿ ಜಾತಿ ಭೇದವಿಲ್ಲದೆ ತಾವುಗಳು ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದ್ದು ನಿಮ್ಮ ಸೇವೆ ಸದಾ ಮುಂದುವರಿಯಲಿ ಎಂದು ಶುಭ ಹಾರೈಸಿದರು. ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಮ್ ಆದಿ ಉಡುಪಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಟಪಾಡಿ ಜಾಮಿಯಾ ಮಸೀದಿ ಅಧ್ಯಕ್ಷರಾಗಿರುವ ವೈ ಎಂ ಇಲ್ಯಾಸ್, ಕಟಪಾಡಿ ಜಾಮಿಯ ಮಸೀದಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಉದ್ಯಮಿಯಾಗಿರುವ ಬಿ ಎಂ ಮೊಯ್ದೀನ್ ಎ ಆರ್, ಎಸ್ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ರಜಾಕ್ ವೈ ಎಸ್, ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಸಾದಿಕ್ ಕೆ ಪಿ, ಕಟಪಾಡಿ ಜಾಮಿಯಾ ಮಸೀದಿ ಇಮಾಮರಾಗಿರುವ ರಶೀದ್ ಮೌಲಾನ, ಉದ್ಯಾವರ ಮಸೀದಿ ಇಮಾಮಾರಾಗಿರುವ ಇಮ್ರಾನ್ ಮೌಲಾನ, ಹೆಚ್ ಐ ಎಸ್ ಎಫ್ ಅಧ್ಯಕ್ಷರಾಗಿರುವ ಇಮ್ತಿಯಾಜ್ ಹಾಗೂ ಉದ್ಯಮಿ ವೈ ಎಂ ಅಯ್ಯೂಬ್ ರವರು ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು.

Advertisements

ಈ ಸಂದರ್ಭದಲ್ಲಿ ಉಡುಪಿಯ ಸಮಾಜ ಸೇವಕರಾಗಿರುವ ಮುನೀರ್ ಕಲ್ಮಾಡಿ ಅವರನ್ನು ಸನ್ಮಾನಿಸಲಾಯಿತು.
ಶಫೀಕ್ ಉಡುಪಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X