ಚಿಕ್ಕಬಳ್ಳಾಪುರ | ಕುಖ್ಯಾತ ಅಪಹರಣಕಾರರ ಗ್ಯಾಂಗ್‌‌ನ ಎಂಟು ಮಂದಿಯ ಬಂಧನ

Date:

Advertisements

ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ.

ಕಳೆದ ಜೂನ್‌, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಹಲವು ಅಪಹರಣ, ಸುಲಿಗೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 8 ಮಂದಿ ಕುಖ್ಯಾತ ಅಪಹರಣಕಾರರನ್ನು ಬಂಧಿಸಿದ್ದಾರೆ.

ಗ್ಯಾಂಗ್‌ ಲೀಡರ್‌ ಬರ್ಕತ್‌ ವುಲ್ಲಾ, ಲೋಹಿತ್‌ ಕುಮಾರ್, ಪ್ರವೀಣ್‌, ಮಾರುತಿ ಪ್ರಸನ್ನ, ಸಂತೋಷ್‌, ಭರತ್‌‌ ಕುಮಾರ್, ವೆಂಕಟೇಶ್‌, ಮರುಮಲ್ಲಪ್ಪ ಬಂಧಿತರು. ಬಂಧಿತರಿಂದ 41 ಲಕ್ಷ ರೂ. ನಗದು, 1 ಚಿನ್ನದ ಸರ, ಮಾರುತಿ ಸ್ವಿಷ್ಟ್‌, ಮಾರುತಿ ಬ್ರಿಜಾ ಹಾಗೂ ಫಾರ್ಚುನರ್‌ ಕಾರುಗಳು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Advertisements

ಈ ಆರೋಪಿಗಳು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಾನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅದಲ್ಲದೆ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಕೃತ್ಯದಲ್ಲೂ ಭಾಗಿಯಾಗಿರುವುದು ತನಿಖೆಯ ವೇಳೆ ತಿಳಿದು ಬಂದಿದೆ.

ಕಳೆದ ಜೂನ್‌ನಲ್ಲಿ ಹಾರೋಬಂಡೆ ಗ್ರಾಮದ ಸಹಕಾರ ಭವನದ ಬಳಿ ವ್ಯಕ್ತಿಯೋರ್ವನನ್ನು ಅಪಹರಿಸಿ 18 ಲಕ್ಷ ರೂ. ನಗದು ಸುಲಿಗೆ ಮಾಡಿದ್ದರು. ಅದಾದ ಬಳಿಕ ಜು.20 ರಂದು ನಂದಿ ಗಿರಿಧಾಮ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಚಿಕ್ಕಸಾಗರ ಗ್ರಾಮದ ಬಳಿ ಬೆಳಗ್ಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ 60 ಲಕ್ಷ ರೂ. ಸುಲಿಗೆ ಮಾಡಿದ್ದರು.

ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಡಿವೈಎಸ್ಪಿಗಳಾದ ಎನ್.ಶಿವಕುಮಾರ್‌, ರವಿಕುಮಾರ್‌, ಪಿಐ ಮಂಜುನಾಥ್‌, ಕೆ.ಪಿ.ಸತ್ಯಾನಾರಾಯಣ್‌, ನಾಯಾರ್ಸ್‌ ಡೈ, ಪ್ರಶಾಂತ್‌ ವರ್ಣಿ, ಸೂರ್ಯಪ್ರಕಾಶ್‌, ಶ್ರೀನಿವಾಸ್‌, ಜನಾರ್ಧನ, ಪಿಎಸ್‌ಐಗಳಾದ ಶರಣಪ್ಪ, ಹರೀಶ್‌ ಹಾಗೂ ಸಿಬ್ಬಂದಿ ವರ್ಗದವರನ್ನು ಎಸ್‌ಪಿ ಕುಶಾಲ್‌ ಚೌಕ್ಸೆ ಅಭಿನಂದಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X