ಕೊಡಗು | ಸದ್ಯದಲ್ಲೇ ಕಂದಾಯ ನಿಗದಿ ಸಮಸ್ಯೆಗೆ ಮುಕ್ತಿ; ಜಿಲ್ಲಾಡಳಿತದಿಂದ ದಿಟ್ಟ ಹೆಜ್ಜೆ

Date:

Advertisements

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ನಿಗದಿ ಆಗದೇ ಇರುವ ಎಲ್ಲ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಕುರಿತು ಪ್ರಾಯೋಗಿಕವಾಗಿ ಗ್ರಾಮವಾರು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಕೊಡಗಿನಲ್ಲಿ ಎಲ್ಲ ಬಾಣೆ ಜಾಗಗಳಿಗೆ ಕಂದಾಯ ನಿಗದಿಯಾಗದೆ ಜಿಲ್ಲೆಯ ಜನತೆ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಜನತೆಯ ಕೂಗಿಗೆ ಸ್ಪಂದಿಸಿದ ಸರ್ಕಾರ ಹಾಗೂ ಜಿಲ್ಲಾಡಳಿತ ತಾಲೂಕು ವ್ಯಾಪ್ತಿಯಲ್ಲಿ ಒಂದೊಂದು ಗ್ರಾಮವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡು ಸದರಿ ಗ್ರಾಮದಲ್ಲಿ ಎಲ್ಲ ಬಾಣೆ ಜಮೀನುಗಳನ್ನು ಕಂದಾಯ ನಿಗದಿಪಡಿಸಲು ತೀರ್ಮಾನಿಸಿ ಜಂಟಿ ಸಮೀಕ್ಷೆ ನಡೆಸಿ ಕ್ರಮ ವಹಿಸಲು ಅಧಿಕಾರಿಗಳನ್ನು ನೇಮಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈಗಾಗಲೇ ಕಾರ್ಯೋನ್ಮುಖರಾಗಿರುವ ಅಧಿಕಾರಿಗಳು ಸಂಪೂರ್ಣವಾಗಿ ಕಂದಾಯಕ್ಕೆ ಒಳಪಡದ ಜಮೀನುಗಳನ್ನು ಗುರುತಿಸಿ ಅಳತೆ ಮಾಡಿ, ಕಂದಾಯ ನಿಗದಿಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಪ್ರಾಯೋಗಿಕವಾಗಿ ಗುರುತಿಸಲಾದ ಗ್ರಾಮಗಳ ನಿವಾಸಿಗಳು ಕಂದಾಯಕ್ಕೆ ಒಳಪಡದ ಜಮೀನುಗಳನ್ನು ಗುರುತಿಸಿ ಸರ್ವೆ ಕಾರ್ಯಕ್ಕೆ ಬರುವ ಅಧಿಕಾರಿಗಳಿಗೆ ಸ್ಥಳವನ್ನು ತೋರಿಸುವ ಕೆಲಸ ಮಾಡಬೇಕಾಗಿದೆ. ಸದ್ಯದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಇದು ವಿಸ್ತಾರಗೊಂಡು ಮೊದಲ ಹಂತದಲ್ಲಿ ಕಂದಾಯ ನಿಗದಿಗೊಳಿಸುವ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ಜನತೆಯ ಬಹು ಬೇಡಿಕೆಯನ್ನು ಸರ್ಕಾರ ಇದೀಗ ಸ್ಪಂದಿಸಿ ಜನೋಪಯೋಗಿ ಕಾರ್ಯಕ್ಕೆ ಮುಂದಾಗಿದೆ” ಎಂದರು.

Advertisements

“ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯಕ್ಕೆ ಒಳಪಡದ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಿಸಿದ ಸರ್ವೆ ನಂಬರ್‌ನ ಹಕ್ಕುದಾರರಿಗೆ ಜಮೀನುಗಳ ಹಕ್ಕು ವರ್ಗಾವಣೆ, ಭೂ ಪರಿವರ್ತನೆ, ಸಿವಿಲ್ ನ್ಯಾಯಾಲಯಗಳಲ್ಲಿ ವ್ಯಾಜ್ಯ ದಾಖಲಿಸುವುದು ಇತ್ಯಾದಿ ಭೂ ಸಂಬಂಧಿತ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಕರಣಗಳು ತಾಲೂಕು ಕಚೇರಿ ಮತ್ತು ಭೂಮಾಪನ ಕಚೇರಿಗಳಲ್ಲಿ ಬಾಕಿ ಉಳಿದುಕೊಂಡಿದ್ದು, ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮತ್ತು ಕಂದಾಯ ನಿಗದಿ ಪ್ರಕರಣಗಳಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸುವ ದೃಷ್ಟಿಯಿಂದ ಇಂಥ ಪ್ರಕರಣಗಳನ್ನು ಗ್ರಾಮವಾರು ಆಂದೋಲನದ ಮೂಲಕ ಕ್ರಮ ಜರುಗಿಸಿ ವಿಲೇವಾರಿ ಮಾಡುವ ಅವಶ್ಯಕತೆ ಕಂಡು ಬಂದಿದ್ದರಿಂದ ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕವಿವಿ ಶುಲ್ಕ ಹೆಚ್ಚಳ, ವಿದ್ಯಾರ್ಥಿವೇತನ ವಿಳಂಬಕ್ಕೆ ಎಐಆರ್‌ಎಸ್‌ಒ ವಿರೋಧ

“ಮಡಿಕೇರಿ ತಾಲೂಕಿನ ಭಾಗಮಂಡಲದ ಬೇಗೂರು ಗ್ರಾಮ, ಸೋಮವಾರಪೇಟೆ ತಾಲೂಕಿನ ಕಿರುಗುಂದೂರು ಗ್ರಾಮ, ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ನಕೂರು ಶಿರಂಗಾಲ ಗ್ರಾಮ, ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ, ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮಗಳಲ್ಲಿ ಮೊದಲ ಹಂತದ ಪ್ರಾಯೋಗಿಕ ಸಮೀಕ್ಷೆ ನಡೆಸಿ ಕಂದಾಯ ನಿಗದಿಗೊಳಿಸಲಾಗುವುದು” ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X