ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್ಇ ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಿಖ್, ಬೌದ್ಧ, ಜೈನ, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಸಮುದಾಯಗಳು, ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತವೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಪೋರ್ಟಲ್ನಲ್ಲಿ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಪ್ರವೇಶ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಬೂಟು, ಕಾಲು ಚೀಲ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ, ಟೂತ್ ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಕಿಟ್, ಪ್ರವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ತಾಲೂಕಿನ ಖ್ಯಾತೆ ಗ್ರಾಮದಲ್ಲಿರುವ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 7676473767 ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ ಗ್ರಾಮ, ಪೆರುಂಬಾಡಿ, ವಿರಾಜಪೇಟೆ ತಾಲೂಕು ಇವರನ್ನು ಅಥವಾ ದೂರವಾಣಿ ಸಂಖ್ಯೆ 8105409405ನ್ನು ಸಂಪರ್ಕಿಸಬಹುದು.
ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು
ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519 ಹಾಗೂ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
