ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Advertisements

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್‍ಇ ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಿಖ್, ಬೌದ್ಧ, ಜೈನ, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಸಮುದಾಯಗಳು, ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತವೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಪೋರ್ಟಲ್‌ನಲ್ಲಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಪ್ರವೇಶ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಬೂಟು, ಕಾಲು ಚೀಲ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ, ಟೂತ್‍ ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಕಿಟ್, ಪ್ರವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತದೆ.

Advertisements

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ತಾಲೂಕಿನ ಖ್ಯಾತೆ ಗ್ರಾಮದಲ್ಲಿರುವ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 7676473767 ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರ್ಜಿ ಗ್ರಾಮ, ಪೆರುಂಬಾಡಿ, ವಿರಾಜಪೇಟೆ ತಾಲೂಕು ಇವರನ್ನು ಅಥವಾ ದೂರವಾಣಿ ಸಂಖ್ಯೆ 8105409405ನ್ನು ಸಂಪರ್ಕಿಸಬಹುದು.

ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು

ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519 ಹಾಗೂ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X