ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ; ಶಾಸಕ ಎ ಎಸ್ ಪೊನ್ನಣ್ಣ

Date:

Advertisements

ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.

ಜಿಲ್ಲೆಯ ವಿರಾಜಪೇಟೆ ಪುರಸಭೆಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ‘ಸ್ವಚ್ಚ ಭಾರತ್’ ಅಭಿಯಾನದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಚ್ಚತಾ ಅಭಿಯಾನಕ್ಕೆ ಕೈಜೋಡಿಸಿದ ವಿರಾಜಪೇಟೆ ಶಾಸಕ ಎ ಎಸ್ ಪೊನ್ಬಣ್ಣ ಖಾಸಗಿ ಬಸ್ ನಿಲ್ದಾಣ ಹಾಗೂ ಒಣಮೀನು ಮಾರುಕಟ್ಟೆಯನ್ನು ಪರಿಶೀಲಿಸಿ, “ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನಸಂಖ್ಯೆ ಇರುವುದರಿಂದ ಅತಿಹೆಚ್ಚು ಘನತ್ಯಾಜ್ಯ ನಿರ್ಮಾಣವಾಗುತ್ತದೆ. ಈ ತ್ಯಾಜ್ಯ ಎಲ್ಲಿ ಹೋಗುತ್ತದೆಂದು ಯಾರಿಗೂ ತಿಳಿಯದು. ಸಾರ್ವಜನಿಕರೂ ಕೂಡಾ ನಗರದ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಪೌರ ಕಾರ್ಮಿಕರ ಜೊತೆ ಕೈ ಜೋಡಿಸಬೇಕು. ಹಾಗಿದ್ದಲ್ಲಿ ಮಾತ್ರ ನಗರವು ಸ್ವಚ್ಛವಾಗಿರುತ್ತದೆ. ಪರಿಸರವೂ ಸ್ವಚ್ಛವಾಗಿರುತ್ತದೆ” ಎಂದು ಹೇಳಿದರು.

Advertisements

ಈ ಸುದ್ದು ಓದಿದ್ದೀರಾ? ಬೀದರ್‌ | ದಲಿತರ ಮೇಲೆ ನಿಲ್ಲದ ದೌರ್ಜನ್ಯ: ಭಾಲ್ಕಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ

ಪುರಸಭೆ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಕಸ, ಗಿಡಗಂಟಿಗಳನ್ನು ತೆರವುಗೊಳಿಸಿದರು.

ಪುರಸಭೆ ಅಧ್ಯಕ್ಷ ಮನೆಯಪಂಡ ದೇಚಮ್ಮ ಕಾಳಪ್ಪ, ವಿರಾಜಪೇಟೆ ತಹಶೀಲ್ದಾರ್ ರಾಮಚಂದ್ರ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಉಪಾಧ್ಯಕ್ಷೆ ಪಸಿಯಾ ತಬಸ್ಸಂ, ಸದಸ್ಯರಾದ ಸಿ ಕೆ ಪೃಥ್ವಿ ನಾಥ್, ಜಲೀಲ್ ಅಹ್ಮದ್, ರಜನಿಕಾಂತ್, ರಂಜಿ ಪೂಣಚ್ಚ, ರಾಜೇಶ್, ಪದ್ಮನಾಭ, ಮಹದೇವ್, ಆಗಸ್ಟೀನ್ ಬೆನ್ನಿ, ಮಹಮ್ಮದ್ ರಫಿ, ಸುನಿತಾ ಜುನಾ, ನಾಮ ನಿರ್ದೇಶನ ಸದಸ್ಯ ಶಬರೀಶ್ ಶೆಟ್ಟಿ ,ದಿನೇಶ್,ಅಮೀದ್, ಪುರಸಭೆ ಕಚೇರಿ ವ್ಯವಸ್ಥಾಪಕಿ ಸುಜಾತ, ಪ್ರಭಾರ ಆರೋಗ್ಯ ನಿರೀಕ್ಷಕಿ ಕೋಮಲ, ಪ್ರಥಮ ದರ್ಜೆ ಸಹಾಯಕಿ ಸುಲೇಖ ಸೇರಿದಂತೆ ಇತರರು ಇದ್ದರು. ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X